Don't Miss!
- News ಬಂಡೀಪುರ: ಹುಲಿ ದಾಳಿಯಿಂದ ಮರಿಯಾನೆ ಸಾವು, ನಡುರಸ್ತೆಯಲ್ಲೇ ಮುಗಿಲು ಮುಟ್ಟಿದ ತಾಯಿಯ ಆಕ್ರಂದನ, ವಿಡಿಯೋ ವೈರಲ್
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಳೆಯಲಿ ಜೊತೆಯಲಿ' ಚಿತ್ರಕ್ಕೆ ಗಣೇಶನ ರಾಗ
ಗೋಲ್ಡನ್ ಸ್ಟಾರ್ ಗಣೇಶ್ ಗಾಯಕರಾಗಿ ಬದಲಾಗಿದ್ದಾರೆ! ತಮ್ಮದೇ ನಿರ್ಮಾಣದ 'ಮಳೆಯಲಿ ಜೊತೆಯಲಿ' ಚಿತ್ರಕ್ಕಾಗಿ ಅವರು ಹಾಡೊಂದನ್ನು ಹಾಡಿದ್ದಾರೆ.ಮಳೆಯಲಿ ಜೊತೆಯಲಿ ಚಿತ್ರದ ನಾಯಕನನ್ನು ಪರಿಚಯಿಸುವ ಈ ಹಾಡಿಗೆ ವಿ ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ.
ತಮ್ಮ ಹತ್ತು ವರ್ಷಗಳ ಸಿನಿ ವೃತ್ತಿ ಜೀವನದಲ್ಲಿ ಗಣೇಶ್ ನಟಿಸುತ್ತಿರುವ 25ನೇ ಚಿತ್ರ ಇದಾಗಿದೆ. ಪೂರ್ಣ ಪ್ರಮಾಣದ ನಾಯಕ ನಟನಾಗಿ ಅಭಿನಯಿಸುತ್ತಿರುವ 12ನೇ ಚಿತ್ರ 'ಮಳೆಯಲಿ ಜೊತೆಯಲಿ'. ಈ ಹಿಂದೆ ಗಣೇಶ್ ನಟಿಸಿದ ಚಿತ್ರಗಳು ಬಾಕ್ಸಾಫೀಸಲ್ಲಿ ಆರೆಕ್ಕೇರಿಲ್ಲ ಮೂರಕ್ಕೆ ಇಳಿದಿಲ್ಲ. ಹಾಗಾಗಿ ಗಣೇಶ್ ಈ ಚಿತ್ರದ ಬಗ್ಗೆ ಅಪಾರ ನಿರೀಕ್ಷೆಯಲ್ಲಿದ್ದಾರೆ.
ಗಣೇಶ್ ರ ಹೆಂಡತಿ ಶಿಲ್ಪಾ ಈ ಚಿತ್ರದ ನಿರ್ಮಾಪಕಿ. ಗಣೇಶ್ ರ ಹುಟ್ಟುಹಬ್ಬದ ದಿನ ಜುಲೈ 2ರಂದು 'ಮಳೆಯಲಿ ಜೊತೆಯಲಿ' ಚಿತ್ರ ಸೆಟ್ಟೇರಲಿದೆ. ಗಣೇಶ್ ತಂಡ ಮತ್ತೊಂದು ಮುಂಗಾರು ಮಳೆ ಕನಸಿನಲ್ಲಿದೆ. ಈ ದಿಶೆಯಲ್ಲಿ ನಿರ್ದೇಶಕ ಪ್ರೀತಂ ಗುಬ್ಬಿ, ಸಂಕಲನಕಾರ ದೀಪು ಮತ್ತು ಛಾಯಾಗ್ರಾಹಕ ಕೃಷ್ಣ ಅವರ ಪ್ರಯತ್ನ ಮುಂದುವರೆದಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)