Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೈದರಾಬಾದಿನಲ್ಲಿ ಗೀತಾಕೃಷ್ಣರ 'ಕಾಫಿ ಶಾಪ್'
ಕನ್ನಡ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ನಿರ್ದೇಶನದ ಸಾರಥ್ಯ ವಹಿಸಿರುವ ಗೀತಾಕೃಷ್ಣ ಚಿತ್ರದ ನಿರ್ಮಾಪಕರು ಹೌದು. ಕಾಫಿ ಶಾಪ್ ಗೆ ಕಥೆ, ಚಿತ್ರಕಥೆ, ಸಂಗೀತ ಹಾಗೂ ಸಂಭಾಷಣೆಯ ಕೊಡುಗೆಯೂ ಇವರದೆ.
ಹಿಂದೆ 'ಸಂಕೀರ್ತನ, 'ಕೋಕಿಲಾ, 'ಪ್ರಿಯತಮ ಹಾಗೂ 'ಸರ್ವರ್ ಸುಂದರಂಗಾರು ಮೊದಲಾದ ಚಿತ್ರಗಳನ್ನು ನಿರ್ದೇಶಿಸಿರುವ ಗೀತಾಕೃಷ್ಣ ಅವರು 'ಸಂಕೀರ್ತನ ಚಿತ್ರಕ್ಕಾಗಿ ಪ್ರತಿಷ್ಟಿತ ನಂದಿ ಪ್ರಶಸ್ತಿ ಪಡೆದವರು. ಪ್ರಸಿದ್ದ ನಟಿ ರಮ್ಯಕೃಷ್ಣರನ್ನು ಮೊದಲ ಬಾರಿಗೆ ತೆಲುಗು ಚಿತ್ರರಂಗಕ್ಕೆ ಕರೆತಂದ ಕೀರ್ತಿ ಗೀತಾಕೃಷ್ಣರದು.
ಶಶಾಂಕ್ ಹಾಗೂ ಬಿಯಾಂಕ ದೇಸಾಯಿ ನಾಯಕ,ನಾಯಕಿಯರಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಜ್ಞಾನಪೀಠ ಪ್ರಶಸ್ತಿ ವಿಜೇತ ಗಿರೀಶ್ ಕಾರ್ನಾಡ್ ಅವರು ಮುಖ್ಯ ಪಾತ್ರ ನಿರ್ವಹಿಸುತ್ತಿದ್ದಾರೆ. ಚಿತ್ರದ ಛಾಯಾಗ್ರಾಹಕ ಮುರುಳಿ ರಘು. ನ್ಯೂಯಾರ್ಕ್ ಯೂನಿವರ್ಸಿಟಿಯಲ್ಲಿ ತರಬೇತಿ ಪಡೆದಿರುವ ಇವರು ಭಾರತ ಚಿತ್ರರಂಗದಲ್ಲೇ ಪ್ರಥಮ ಬಾರಿಗೆ ರೆಡ್ 1 ಕ್ಯಾಮೆರಾವನ್ನು ಕಾಫಿ ಶಾಪ್ ಚಿತ್ರಕ್ಕಾಗಿ ಬಳಸುತ್ತಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)