Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಣ್ಣ ಹಚ್ಚಿಕೊಳ್ಳಬೇಕೆಂಬ ಮಂಜಣ್ಣನ ಆಸೆ ನಿರಾಸೆ
ಕಿಚ್ಚ ಹುಚ್ಚ ಚಿತ್ರವನ್ನು ಸ್ವತಃ ಮಂಜು ಅವರೇ ನಿರ್ಮಿಸುತ್ತಿದ್ದಾರೆ. ''ನಕಾರಾತ್ಮಕ ಪಾತ್ರಗಳಲ್ಲಿ ನಟಿಸಲು ನನ್ನ ಹೆಂಡತಿಗೆ ಇಷ್ಟವಿಲ್ಲ. ಖಾಸಗಿ ಜೀವನದಲ್ಲೂ ಆ ಪಾತ್ರದ ಪ್ರಭಾವ ಇರುತ್ತ್ತದೆ. ಒಂದೇ ಒಂದು ದಿನದ ಮಟ್ಟಿಗೆ ಚಿತ್ರೀಕರಣದಲ್ಲೂ ಭಾಗವಹಿಸಿದ್ದೆ. ನನ್ನ ಹೆಂಡತಿ ಸೇರಿದಂತೆ ಎಲ್ಲರೂ ವಿರೋಧ ವ್ಯಕ್ತಪಡಿಸಿದ್ದರಿಂದ ನಟನೆಯನ್ನು ಕೈಬಿಟ್ಟಿದ್ದೇನೆ'' ಎನ್ನುತ್ತಾರೆ ಮಂಜು. ಮಂಜು ಅವರ ಖಳ ನಾಯಕನ ಪಾತ್ರದ ಜಾಗಕ್ಕೆ ರಮೇಶ್ ಚಂದ್ರ ಆಗಮಿಸಿದ್ದಾರೆ. ಈ ಚಿತ್ರವನ್ನು ಚಿ.ಗುರುದತ್ ನಿರ್ದೇಶಿಸುತ್ತಿದ್ದು ಈಗಾಗಲೇ ಚಿತ್ರೋದ್ಯಮದಲ್ಲಿ ಭಾರಿ ಕುತೂಹಲ ಮೂಡಿಸಿದೆ.
ಕನ್ನಡದಲ್ಲಿ 25ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಿಸಿರುವ ಮಂಜು ತಮ್ಮ ಚಿತ್ರದಲ್ಲಿ ನಟಿಸಲೇ ಬೇಕು ಎಂದು ನಿರ್ದೇಶಕ ಗುರುದತ್ ಪಟ್ಟು ಹಿಡಿದಿದ್ದರಿಂದ ವಿಧಿಯಿಲ್ಲದೆ ಅವರು ಓಕೆ ಎಂದಿದ್ದರು. ಒಂದು ವೇಳೆ ಚಿತ್ರದಲ್ಲಿ ನೀವು ನಟಿಸಲಿಲ್ಲ ಎಂದರೆ ಚಿತ್ರವನ್ನು ನಿರ್ದೇಶಿಸುವುದಿಲ್ಲ ಎಂಬ ಬೆದರಿಕೆಯನ್ನು ಗುರುದತ್ ಒಡ್ಡಿದ್ದರು! ''ನಾವಿಬ್ಬರೂ ಮತ್ತೊಂದು ಚಿತ್ರವನ್ನು ಕೈಗೆತ್ತಿಕೊಂಡಿದ್ದೇವೆ. ನಕಾರಾತ್ಮಕ ಅಂಶಗಳಿಲ್ಲದ ಪಾತ್ರವೊಂದರಲ್ಲಿ ನಟಿಸಲಿದ್ದೇನೆ'' ಎನ್ನುತ್ತಾರೆ ಮಂಜು.
ತಮಿಳಿನ ಯಶಸ್ವಿ 'ಚಿತ್ರಂ ಪೆಸುತಾಡಿ' ಚಿತ್ರದ ರೀಮೇಕ್ ಕಿಚ್ಚಹುಚ್ಚ. ಈಗಾಗಲೇ ಸುದೀಪ್ ನಟಿಸಿರುವ 'ಹುಚ್ಚ ' ಚಿತ್ರ ಮತ್ತು ಸುದೀಪ್ ಅಭಿಮಾನಿಗಳು ನೀಡಿರುವ 'ಕಿಚ್ಚ'ಎರಡೂ ಪದಗಳನ್ನು ಸೇರಿಸಿ 'ಕಿಚ್ಚ ಹುಚ್ಚ' ಎಂದು ನಾಮಕರಣ ಮಾಡಲಾಗಿದೆ. ತಮಿಳಿನಲ್ಲಿ ಭರ್ಜರಿ ಯಶಸ್ಸು ದಾಖಲಿಸಿದ್ದ 'ಸೇತು' ಚಿತ್ರ ಕನ್ನಡಕ್ಕೆ 'ಹುಚ್ಚ' ಎಂಬ ಹೆಸರಿನಲ್ಲಿ ರೀಮೇಕ್ ಆಗಿತ್ತು. ಸುದೀಪ್ ಗೆ ಉತ್ತಮ ಬ್ರೇಕ್ ನೀಡಿದ ಚಿತ್ರ.
(ದಟ್ಸ್ ಕನ್ನಡ ಚಿತ್ರವಾರ್ತೆ)