Don't Miss!
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Automobiles ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಭರತ್ ಭಾಗವತರ್ ದಿವಂಗತ
ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಭಾನುವಾರ ನಡೆಯಲಿದೆ. ಇವರು ಜಿವಿ ಅಯ್ಯರ್ ನಿರ್ದೇಶನದ 'ಹಂಸಗೀತೆ' ಚಿತ್ರದ ಮೂಲಕ ಬಾಲನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ನಂತರ ಸಿದ್ದಲಿಂಗಯ್ಯ ಅವರ ನಿರ್ದೇಶನದ 'ಹೇಮಾವತಿ' ಚಿತ್ರದಲ್ಲಿ ಯುವನಟರಾಗಿ ಕಾಣಿಸಿಕೊಂಡರು. ಅಲ್ಲಿಂದ ಇಲ್ಲಿಯವರೆಗೆ ಸುಮಾರು 200 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
'ಋಣಮುಕ್ತಳು' .'ಬಿಡುಗಡೆಯ ಬೇಡಿ','ಬಂಗಾರದ ಕಳಶ', 'ಪ್ರಚಂಡರಾವಣ' ಇವರ ಅಭಿನಯದ ಪ್ರಮುಖ ಚಿತ್ರಗಳು. ಇತ್ತೀಚೆಗೆ ಬಿಡುಗಡೆಯಾದ 'ಕೆಂಪ' ಚಿತ್ರದಲ್ಲೂ ನಟಿಸಿದ್ದಾರೆ.
'ಪ್ರಚಂಡ ರಾವಣ' ಚಿತ್ರದಲ್ಲಿ ಆಂಜನೇಯನ ಪಾತ್ರವಹಿಸಿ, ನಿರ್ಮಾಪಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಕಳೆದ 30 ವರ್ಷಗಳಿಂದ ಚಿತ್ರರಂಗದಲ್ಲಿದ್ದ ಭರತ್ ಅವರು, ಟಿಎನ್ ಸೀತಾರಾಂ ಅವರ ನಿರ್ದೇಶನ 'ಮಾಯಾಮೃಗ' ಸೇರಿದಂತೆ 'ಬಿದಿಗೆ ಚಂದ್ರಮ', 'ಮನೆಯೊಂದು ಮೂರು ಬಾಗಿಲು', 'ಮಹಾಯಾನ', 'ಅಗ್ನಿಶಿಖೆ' ಮುಂತಾದ ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ಸುಮಾರು 30 ವರ್ಷಗಳ ಕಾಲ ಕಲಾ ಜೀವನ ಸವೆಸಿದ್ದರು. ಭರತ್ ಕುಟುಂಬದ ಕಲಾಸೇವೆಯನ್ನು ಅವರ ಪುತ್ರಿಯರಾದ ಲಕ್ಷ್ಮಿಶ್ರೀ ಹಾಗೂ ಮೇಘಶ್ರೀ ಮುಂದುವರೆಸಿಕೊಂಡು ಹೋಗುತ್ತಿರುವುದು ಸಂತಸದ ಸಂಗತಿ.
(ದಟ್ಸ್
ಕನ್ನಡ
ಸಿನಿಸಂತಾಪ)
ಖ್ಯಾತ
ರಂಗ
ನಿರ್ದೇಶಕ
ಬಾಲಕೃಷ್ಣ
ಪೈ
ನಿಧನ