Don't Miss!
- Sports IPL 2024: ಚಿನ್ನಸ್ವಾಮಿ ಸಾಮ್ರಾಜ್ಯದಲ್ಲಿ ರಾಜ್ಯಭಾರ ಮಾಡಿದ ವಿರಾಟ್; KKRಗೆ ಸವಾಲಿನ ಗುರಿ ನೀಡಿದ RCB
- Lifestyle 10 ವರ್ಷದಿಂದ ನಿರಂತರ ರಕ್ತ ಕುಡಿಯುತ್ತಿರುವ ಯುವತಿ..! ರಕ್ತವೇ ಟೀ, ಅದರಲ್ಲೇ ಊಟ..!
- News Rain Alert: ಕೊಡಗಿನ ವಿವಿಧಡೆ ಮಳೆ ಅಬ್ಬರ: ಮೋಡ ಕವಿದ ವಾತಾವರಣ
- Automobiles Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉಷಾ ನವರತ್ನರಾಮ್ ಕತೆ ಆಧಾರಿತ 'ತರಂಗಿಣಿ'
ಉಷಾ ನವರತ್ನರಾಮ್ ರವರ ಕಾದಂಬರಿ ಆಧಾರಿತ ಚಿತ್ರ 'ತರಂಗಿಣಿ'. ಈ ಚಿತ್ರವನ್ನು ಶ್ರೀನಿವಾಸ್ ಕೌಶಿಕ್ ನಿರ್ದೇಶಿಸುತ್ತಿದ್ದಾರೆ. ಇವರು ಕಳೆದ ವರ್ಷ 'ಯಾರದು' ಚಿತ್ರ ನಿರ್ದೇಶಿಸಿದ್ದರು. ಫೆಬ್ರವರಿ 8 ರಂದು ಕೊಳ್ಳೇಗಾಲದಲ್ಲಿ ಈ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದೆ. ಬೆಂಗಳೂರು ಸುತ್ತಮುತ್ತ ನಿರಂತರ ಚಿತ್ರೀಕರಣ ನಡೆಯುತ್ತಿದ್ದು, ಈ ತಿಂಗಳ ಕೊನೆಗೆ ಮುಕ್ತಾಯಗೊಳ್ಳಲಿದೆ.
ಚುರುಕಾದ ಸಂಭಾಷಣೆ, ಮನಮಿಡಿಯುವ ಹೃದಯ ಸ್ಪರ್ಶಿ ಸನ್ನಿವೇಶಗಳಿಂದ ಕೂಡಿದ ಸಾಂಸಾರಿಕ ಕಥಾಹಂದರವುಳ್ಳ ಈ ಚಿತ್ರಕ್ಕೆ ನಾಗೇಶ್ ಆಚಾರ್ಯರ ಛಾಯಾಗ್ರಹಣ, ಶ್ರೀನಿವಾಸ್ ಕೌಶಿಕ್ರ ಚಿತ್ರಕಥೆ, ಸಂಭಾಷಣೆ ಹಾಗೂ ಕಪಾಲಿ ಅವರ ನಿರ್ಮಾಣ, ನಿರ್ವಹಣೆ ಇದೆ. ಶ್ರೀ ಪರಮೇಶ್ವರಿ ಆರ್ಟ್ಸ್ ಲಾಂಛನದಲ್ಲಿ ವೈ.ಶ್ರೀನಿವಾಸ್ ಡಿ.ಬಿ. ಕುಮಾರಸ್ವಾಮಿ ನಿರ್ಮಿಸುತ್ತಿದ್ದಾರೆ.
ಈ ಚಿತ್ರದ ತಾರಾಗಣದಲ್ಲಿ ಮೋಹನ್, ಬಿ.ಸಿ. ಪಾಟೀಲ್, ತೇಜಸ್ವಿನಿ, ಶೋಭರಾಜ್, ಶ್ರೀನಿವಾಸಮೂರ್ತಿ, ದತ್ತಣ್ಣ, ಕೃಷ್ಣೇಗೌಡ, ಜಯಶ್ರೀ, ಎಂಡಿಕೌಶಿಕ್, ವೀಣಾ ಸುಂದರ್, ಆಡಿಟರ್ ಶ್ರೀನಿವಾಸ್ ಹಾಗೂ ಕೆ.ಎಸ್. ರವೀಂದ್ರನಾಥ್ ಅಭಿನಯಿಸುತ್ತಿದ್ದಾರೆ.