Don't Miss!
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- News Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉಷಾ ನವರತ್ನರಾಮ್ ಕತೆ ಆಧಾರಿತ 'ತರಂಗಿಣಿ'
ಉಷಾ ನವರತ್ನರಾಮ್ ರವರ ಕಾದಂಬರಿ ಆಧಾರಿತ ಚಿತ್ರ 'ತರಂಗಿಣಿ'. ಈ ಚಿತ್ರವನ್ನು ಶ್ರೀನಿವಾಸ್ ಕೌಶಿಕ್ ನಿರ್ದೇಶಿಸುತ್ತಿದ್ದಾರೆ. ಇವರು ಕಳೆದ ವರ್ಷ 'ಯಾರದು' ಚಿತ್ರ ನಿರ್ದೇಶಿಸಿದ್ದರು. ಫೆಬ್ರವರಿ 8 ರಂದು ಕೊಳ್ಳೇಗಾಲದಲ್ಲಿ ಈ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದೆ. ಬೆಂಗಳೂರು ಸುತ್ತಮುತ್ತ ನಿರಂತರ ಚಿತ್ರೀಕರಣ ನಡೆಯುತ್ತಿದ್ದು, ಈ ತಿಂಗಳ ಕೊನೆಗೆ ಮುಕ್ತಾಯಗೊಳ್ಳಲಿದೆ.
ಚುರುಕಾದ ಸಂಭಾಷಣೆ, ಮನಮಿಡಿಯುವ ಹೃದಯ ಸ್ಪರ್ಶಿ ಸನ್ನಿವೇಶಗಳಿಂದ ಕೂಡಿದ ಸಾಂಸಾರಿಕ ಕಥಾಹಂದರವುಳ್ಳ ಈ ಚಿತ್ರಕ್ಕೆ ನಾಗೇಶ್ ಆಚಾರ್ಯರ ಛಾಯಾಗ್ರಹಣ, ಶ್ರೀನಿವಾಸ್ ಕೌಶಿಕ್ರ ಚಿತ್ರಕಥೆ, ಸಂಭಾಷಣೆ ಹಾಗೂ ಕಪಾಲಿ ಅವರ ನಿರ್ಮಾಣ, ನಿರ್ವಹಣೆ ಇದೆ. ಶ್ರೀ ಪರಮೇಶ್ವರಿ ಆರ್ಟ್ಸ್ ಲಾಂಛನದಲ್ಲಿ ವೈ.ಶ್ರೀನಿವಾಸ್ ಡಿ.ಬಿ. ಕುಮಾರಸ್ವಾಮಿ ನಿರ್ಮಿಸುತ್ತಿದ್ದಾರೆ.
ಈ ಚಿತ್ರದ ತಾರಾಗಣದಲ್ಲಿ ಮೋಹನ್, ಬಿ.ಸಿ. ಪಾಟೀಲ್, ತೇಜಸ್ವಿನಿ, ಶೋಭರಾಜ್, ಶ್ರೀನಿವಾಸಮೂರ್ತಿ, ದತ್ತಣ್ಣ, ಕೃಷ್ಣೇಗೌಡ, ಜಯಶ್ರೀ, ಎಂಡಿಕೌಶಿಕ್, ವೀಣಾ ಸುಂದರ್, ಆಡಿಟರ್ ಶ್ರೀನಿವಾಸ್ ಹಾಗೂ ಕೆ.ಎಸ್. ರವೀಂದ್ರನಾಥ್ ಅಭಿನಯಿಸುತ್ತಿದ್ದಾರೆ.