Don't Miss!
- News Gold Price on April 18th: ಬಂಗಾರ ದರ ತುಸು ಇಳಿಕೆ, ನಿಮ್ಮ ನಗರದಲ್ಲಿ ಎಷ್ಟಿದೆ ಪರಿಶೀಲಿಸಿ? ಅಂಕಿಅಂಶಗಳ ವಿವರ ಇಲ್ಲಿದೆ
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Lifestyle ಬೇಸಿಗೆಯಲ್ಲಿ ದಿನಾ ಎಳನೀರು ಕುಡಿದರೆ ಏನಾಗುತ್ತೆ? ಯಾವ ಸಮಯದಲ್ಲಿ ಎಳನೀರು ಕುಡಿಯಬೇಕು?
- Sports India's Squad For T20 World Cup: ಟಿ20 ವಿಶ್ವಕಪ್ಗೆ ಸಂಭಾವ್ಯ 20 ಸದಸ್ಯರ ಭಾರತ ತಂಡ
- Technology WhatsApp: ವಾಟ್ಸಾಪ್ಗೆ ಕೆಲವೇ ದಿನಗಳಲ್ಲಿ ಸೇರಲಿವೆ ಬಹುನಿರೀಕ್ಷಿತ ಈ ಫೀಚರ್ಸ್! ಇವುಗಳಿಂದ ಏನೆಲ್ಲಾ ಲಾಭ?
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಾಯದಂಥ ಮಳೆ'ಯಲ್ಲಿ ಹುಡುಗಿ ಹುಡುಕಾಟ
ವಯಸ್ಸಿಗೆ ಬಂದ ಹೆಣ್ಣುಮಕ್ಕಳಿಗೆ ತಂದೆ ಮದುವೆ ಮಾಡಿಸುವುದು ಲೋಕದಲ್ಲಿ ಸಹಜ. ಆದರೆ ಇಲ್ಲಿ ಸ್ವಲ್ಪ ಬದಲಾಗಿದೆ. ಹುಡುಗಿಯೊಬ್ಬಳು ತನ್ನ ತಂದೆಗೆ ಮದುವೆ ಮಾಡಿಸುವ ಸಲುವಾಗಿ ಹುಡುಗಿ ಹುಡುಕುತ್ತಾ ಹೊರಟ್ಟಿದ್ದಾಳೆ. ಮಾರ್ಗದಲ್ಲಿ ಎಷ್ಟೋ ಹುಡುಗಿಯರು ಸಿಕ್ಕಿದರಾದರು ಅವರಾರೂ ಹೊಂದಿಕೆಯಾಗಲಿಲ್ಲ. ವಧು ಅನ್ವೇಷಣೆಯಲ್ಲಿ ಸಾಗುತ್ತಿದ್ದ ಈ ತರುಣಿಗೆ ಕೊನೆಗೂ ಒಬ್ಬ ಹುಡುಗಿ ಹಿಡಿಸುತ್ತಾಳೆ.
ಅವಳ ಬಳಿ ಬಂದ ಈ ತರುಣಿ "ನೀವು ನೋಡಲಿಕ್ಕೆ ಸುಂದರವಾಗಿದ್ದೀರಾ. ನಮ್ಮಪ್ಪನನ್ನು ಮದುವೆ ಆಗುತ್ತೀರಾ?" ಎಂದು ಕೇಳುವ ಸನ್ನಿವೇಶವನ್ನು ಗಂಗಾಪರಮೇಶ್ವರಿ ಪ್ರೋಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ 'ಮಾಯದಂಥ ಮಳೆ' ಚಿತ್ರಕ್ಕಾಗಿ ನಿರ್ದೇಶಕ ವೀರೇಶ್ ದೊಡ್ಡಬಳ್ಳಾಪುರ ಚಿತ್ರಿಸಿಕೊಂಡರು. ಮಲ್ಲೇಶ್ವರಂ ರಸ್ತೆಗಳಲ್ಲಿ ಚಿತ್ರೀಕರಣಗೊಂಡ ಈ ಸನ್ನಿವೇಶದಲ್ಲಿ ಭಾವನಾರಾವ್ ಹಾಗೂ ಋತು ಅಭಿನಯಿಸಿದ್ದರು.
ಸಾಕಷ್ಟು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿರುವ ವೀರೇಶ್ ದೊಡ್ಡಬಳ್ಳಾಪುರ ಈ ಚಿತ್ರವನ್ನು ನಿರ್ದೇಶಿಸುವ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಕವಿರಾಜ್, ಕಲ್ಯಾಣ್, ವಿ.ನಾಗೇಂದ್ರ ಪ್ರಸಾದ್ ಹಾಗೂ ಮಂಜುನಾಥರಾವ್ ರಚಿಸಿರುವ ಹಾಡುಗಳಿಗೆ ಮ್ಯೂಜಿಕ್ ಮೋಹನ್ ಸಂಗೀತ ನೀಡಿದ್ದಾರೆ.
ಕೆರೆಮಲ್ಲು ಬದ್ರಿ ಅವರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಿರ್ದೇಶಕರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಎ.ಸಿ.ಮಹೇಂದರ್ ಛಾಯಾಗ್ರಹಣ, ಕೆಂಪರಾಜ್ ಅವರ ಸಂಕಲವಿರುವ ಚಿತ್ರದ ತಾರಾಬಳಗದಲ್ಲಿ ರವಿಚೇತನ್, ಭಾವನಾರಾವ್, ರೂಪಿಕಾ, ಶರತ್ಬಾಬು, ಶ್ರುತಿ, ಪ್ರಕಾಶ್ಶೆಣೈ, ಸಿಹಿಕಹಿಚಂದ್ರು, ಪದ್ಮಜಾರಾವ್, ರೇಖಾಕುಮಾರ್, ಹೊನ್ನವಳಿ ಕೃಷ್ಣ, ಸುಂದರಶ್ರೀ, ಋತು, ಮಿಮಿಕ್ರಿ ರಾಜಗೋಪಾಲ್ ಮುಂತಾದವರಿದ್ದಾರೆ.