Don't Miss!
- News Lok Sabha Election 2024: ಬೆಂಗಳೂರು ಉತ್ತರದಲ್ಲಿ ಬಿಜೆಪಿಯದ್ದೇ ಪ್ರಾಬಲ್ಯ! ಶೋಭಾ ಎದುರು ‘ಕೈ’ ಅಸ್ತ್ರ ವರ್ಕೌಟ್ ಆಗುತ್ತಾ?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನಸಿನೊಂದಿಗೆ ಪ್ರಕಾಶ್ ರೈ ರಾಜ್ಯದಾದ್ಯಂತ ಪ್ರವಾಸ
ಚೊಚ್ಚಲ ಕನಸಿನ ಸಂಭ್ರಮದಲ್ಲಿರುವ ಪ್ರಕಾಶ್ ರೈ ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ. ರೈ ಮೊದಲ ನಿರ್ದೇಶನದಲ್ಲಿ ಮೂಡಿಬಂದ 'ನಾನು ನನ್ನ ಕನಸು' ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ಚಿತ್ರವನ್ನು ಮತ್ತಷ್ಟು ಪ್ರೇಕ್ಷಕರಿಗೆ ತಲುಪಿಸುವ ಪ್ರಯತ್ನಕ್ಕೆ ಕೈಹಾಕಿದ್ದಾರೆ.
'ನಾನು ನನ್ನ ಕನಸು' ಚಿತ್ರದ ಬಗ್ಗೆ ಇತ್ತೀಚೆಗೆ ನಡೆದ ಸಂವಾದ ಪ್ರೇಕ್ಷಕರ ನಾಡಿಮಿಡಿತವನ್ನು ಅರಿಯುವಲ್ಲಿ ಪ್ರಕಾಶ್ ರೈಗೆ ಸಹಕರಿಸಿದೆ. ಮುಖ್ಯವಾಗಿ ಯುವ ಜನಾಂಗ ಸಂವಾದ ಕಾರ್ಯಕ್ರಮದಲ್ಲಿ ಹೆಚ್ಚಾಗಿ ಭಾಗವಹಿಸಿತ್ತು. ಪಂಜಾಬಿ ಕುಟುಂಬ ಹಾಗೂ ಹಿರಿಯರೂ ಸಹ ಆಗಮಿಸಿದ್ದದ್ದು ಅವರ ಉತ್ಸಾಹವನ್ನು ಇಮ್ಮಡಿಸಿದೆಯಂತೆ.
ಹೊಸ ಹೊಸ ಚಿತ್ರಗಳು ತೆರೆಗೆ ಬರುತ್ತಿದ್ದರೂ 'ಕನಸು' ಚಿತ್ರ ಮಾತ್ರ ಬಾಕ್ಸಾಫೀಸಲ್ಲಿ ತನ್ನ ಹಿಡಿತವನ್ನು ಬಿಟ್ಟುಕೊಟ್ಟಿಲ್ಲ. ಪ್ರೇಕ್ಷಕರ ಪ್ರತಿಕ್ರಿಯೆ ತಿಳಿಯಲು ಇತ್ತೀಚೆಗೆ ಅವರು ಮೈಸೂರಿನ ಚಿತ್ರಮಂದಿರ ಒಂದಕ್ಕೆ ಭೇಟಿ ನೀಡಿದ್ದರು. ಹಾಸನ, ದಾವಣಗೆರೆ ಮತ್ತು ಶಿವಮೊಗ್ಗಕ್ಕೂ ಪ್ರಕಾಶ್ ರೈ ಪಯಣ ಸಾಗಲಿದೆ. ಮುಂಬರುವ ದಿನಗಳಲ್ಲಿ ಬೆಳಗಾವಿ, ಹುಬ್ಬಳ್ಳಿ ಮತ್ತು ಗದಗ ಜಿಲ್ಲೆಗಳು 'ಕನಸಿ'ನ ತಂಡದೊಂದಿಗೆ ಭೇಟಿ ನೀಡಲಿದ್ದಾರೆ.