Don't Miss!
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- News Delhi Rain: ದೆಹಲಿಯಲ್ಲಿ ದಾರಾಕಾರ ಮಳೆ: ಬಿಸಿಲಿನ ಶಾಖದಿಂದ ಪರಿಹಾರ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನಸಿನೊಂದಿಗೆ ಪ್ರಕಾಶ್ ರೈ ರಾಜ್ಯದಾದ್ಯಂತ ಪ್ರವಾಸ
ಚೊಚ್ಚಲ ಕನಸಿನ ಸಂಭ್ರಮದಲ್ಲಿರುವ ಪ್ರಕಾಶ್ ರೈ ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ. ರೈ ಮೊದಲ ನಿರ್ದೇಶನದಲ್ಲಿ ಮೂಡಿಬಂದ 'ನಾನು ನನ್ನ ಕನಸು' ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ಚಿತ್ರವನ್ನು ಮತ್ತಷ್ಟು ಪ್ರೇಕ್ಷಕರಿಗೆ ತಲುಪಿಸುವ ಪ್ರಯತ್ನಕ್ಕೆ ಕೈಹಾಕಿದ್ದಾರೆ.
'ನಾನು ನನ್ನ ಕನಸು' ಚಿತ್ರದ ಬಗ್ಗೆ ಇತ್ತೀಚೆಗೆ ನಡೆದ ಸಂವಾದ ಪ್ರೇಕ್ಷಕರ ನಾಡಿಮಿಡಿತವನ್ನು ಅರಿಯುವಲ್ಲಿ ಪ್ರಕಾಶ್ ರೈಗೆ ಸಹಕರಿಸಿದೆ. ಮುಖ್ಯವಾಗಿ ಯುವ ಜನಾಂಗ ಸಂವಾದ ಕಾರ್ಯಕ್ರಮದಲ್ಲಿ ಹೆಚ್ಚಾಗಿ ಭಾಗವಹಿಸಿತ್ತು. ಪಂಜಾಬಿ ಕುಟುಂಬ ಹಾಗೂ ಹಿರಿಯರೂ ಸಹ ಆಗಮಿಸಿದ್ದದ್ದು ಅವರ ಉತ್ಸಾಹವನ್ನು ಇಮ್ಮಡಿಸಿದೆಯಂತೆ.
ಹೊಸ ಹೊಸ ಚಿತ್ರಗಳು ತೆರೆಗೆ ಬರುತ್ತಿದ್ದರೂ 'ಕನಸು' ಚಿತ್ರ ಮಾತ್ರ ಬಾಕ್ಸಾಫೀಸಲ್ಲಿ ತನ್ನ ಹಿಡಿತವನ್ನು ಬಿಟ್ಟುಕೊಟ್ಟಿಲ್ಲ. ಪ್ರೇಕ್ಷಕರ ಪ್ರತಿಕ್ರಿಯೆ ತಿಳಿಯಲು ಇತ್ತೀಚೆಗೆ ಅವರು ಮೈಸೂರಿನ ಚಿತ್ರಮಂದಿರ ಒಂದಕ್ಕೆ ಭೇಟಿ ನೀಡಿದ್ದರು. ಹಾಸನ, ದಾವಣಗೆರೆ ಮತ್ತು ಶಿವಮೊಗ್ಗಕ್ಕೂ ಪ್ರಕಾಶ್ ರೈ ಪಯಣ ಸಾಗಲಿದೆ. ಮುಂಬರುವ ದಿನಗಳಲ್ಲಿ ಬೆಳಗಾವಿ, ಹುಬ್ಬಳ್ಳಿ ಮತ್ತು ಗದಗ ಜಿಲ್ಲೆಗಳು 'ಕನಸಿ'ನ ತಂಡದೊಂದಿಗೆ ಭೇಟಿ ನೀಡಲಿದ್ದಾರೆ.