Don't Miss!
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- News ಲೋಕಸಭಾ ಚುನಾವಣೆ 2024: ಈ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನ; ಕಾರಣವೇನು?
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉಪ್ಪಿ ಜೊತೆ ಕೈಜೋಡಿಸಿದ ಗೋಲ್ಡನ್ ಗರ್ಲ್ ರಮ್ಯಾ
ಈಗಾಗಲೆ ಒಂದು ಚಿತ್ರದಲ್ಲಿ ಉಪೇಂದ್ರ ಜೊತೆ ಗೋಲ್ಡನ್ ಗರ್ಲ್ ರಮ್ಯಾ ಅಭಿನಯಿಸಿದ್ದಾರೆ. ಅದು 'ಭೀಮೂಸ್ ಬ್ಯಾಂಗ್ ಬ್ಯಾಂಗ್ ಕಿಡ್ಸ್' ಚಿತ್ರ . ಆದರೆ ಈ ಚಿತ್ರ ಇನ್ನೂ ಡಬ್ಬದಲ್ಲೇ ಮುದುಡಿ ಕುಳಿತಿದೆ. ಈಗ ರಿಯಲ್ ಸ್ಟಾರ್ ಉಪೇಂದ್ರ ಜೊತೆ ಮತ್ತೊಂದು ಚಿತ್ರಕ್ಕೆ ರಮ್ಯಾ ಸಹಿ ಹಾಕಿದ್ದಾರೆ.
ಚಿತ್ರದ ಹೆಸರು 'ಗಾಂಧಿನಗರ ಮಹಾತ್ಮೆ'. 'ಜೋಗಯ್ಯ' ನಿರ್ದೇಶಕ ಪ್ರೇಮ್ ಈ ಚಿತ್ರದ ಮತ್ತೊಬ್ಬ ನಟ. ಮಲಯಾಳಂನ ಯಶಸ್ವಿ ಚಿತ್ರ 'ಉದಯನಾನು ಥರಂ' ರೀಮೇಕ್ ಇದಾಗಿದೆ."ಮೂಲ ಚಿತ್ರವನ್ನು ಯಥಾವತ್ತಾಗಿ ಕನ್ನಡಕ್ಕೆ ಭಟ್ಟಿ ಇಳಿಸುತ್ತಿಲ್ಲ. ಚಿತ್ರಕತೆಯಲ್ಲಿ ಸ್ವಲ್ಪ ಬದಲಾವಣೆಗಳಲ್ಲೂ ಮಾಡಿಕೊಂಡು ತೆರೆಗೆ ತರುತ್ತಿದ್ದಾರೆ ಉಪೇಂದ್ರ" ಎಂದಿದ್ದಾರೆ ರಮ್ಯಾ.
ಈ ಕಾರಣಕ್ಕಾಗಿಯೇ 'ಗಾಂಧಿನಗರ ಮಹಾತ್ಮೆ'ಯನ್ನು ಒಪ್ಪಿಕೊಂಡೆ. ಚಿತ್ರದ ಕತೆ ಭಾಗಶಃ ಪೌರಾಣಿಕವಾಗಿದ್ದು ತಮ್ಮ ಪಾತ್ರ ದ್ರೌಪತಿಯನ್ನು ಹೋಲುತ್ತದೆ. ಈ ರೀತಿಯ ಚಿತ್ರದಲ್ಲಿ ಅಭಿನಯಿಸಬೇಕು ಎಂದು ಬಯಸಿದ್ದೆ. ಹಾಗಾಗಿ ಚಿತ್ರವನ್ನು ಒಪ್ಪಿರುವುದಾಗಿ ರಮ್ಯಾ ತಿಳಿಸಿದ್ದಾರೆ. ಸೆಪ್ಟೆಂಬರ್ 18ರ ಉಪ್ಪಿ ಬರ್ತ್ಡೇಯಂದು ಚಿತ್ರ ಸೆಟ್ಟೇರಲಿದೆ. (ದಟ್ಸ್ಕನ್ನಡ ಸಿನಿವಾರ್ತೆ)