Don't Miss!
- News ಚುನಾವಣೆ ಹೊತ್ತಲ್ಲೇ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ಗೆ ಕೋರ್ಟ್ ಸಮನ್ಸ್: ಯಾಕೆ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾಸರವಳ್ಳಿ ಚಿತ್ರದಲ್ಲಿ ನಟಿಸಲು ಸಿದ್ಧ, ಆದರೆ...ಪುನೀತ್
ಕಾದಂಬರಿ ಆಧಾರಿತ ಚಿತ್ರಗಳಲ್ಲಿ ನಟಿಸಲು ನನ್ನದೇನು ತಕರಾರಿಲ್ಲ. ಹೊಸ ಹೊಸ ಪ್ರಯೋಗಗಳನ್ನು ಮಾಡಲು ನಾನು ಸದಾ ಸಿದ್ಧನಾಗಿದ್ದೇನೆ. ಕನ್ನಡದ ಪ್ರತಿಭಾವಂತ ನಿರ್ದೇಶಕ ಡಾ.ಗಿರೀಶ್ ಕಾಸರವಳ್ಳಿ ಚಿತ್ರಗಳಲ್ಲಿ ನಟಿಸಲು ನನ್ನದೇನು ಅಭ್ಯಂತರವಿಲ್ಲ. ಆದರೆ ನನ್ನ ಚಿತ್ರ ಎಲ್ಲರಿಗೂ ತಲುಪಬೇಕು ಎಂಬ ಮಹತ್ವಾಕಾಂಕ್ಷೆ ಇದೆ. ಕೇವಲ ಏಳು ಎಂಟು ಜನ ನೋಡುವುದು ನನಗಿಷ್ಟವಿಲ್ಲ ಎಂದಿದ್ದಾರೆ ಪುನೀತ್ ರಾಜ್ ಕುಮಾರ್.
ಸಿನಿಮಾ ಎಂಬುದು ಮನರಂಜನಾ ಮಾಧ್ಯಮ. ಚಿತ್ರದಿಂದ ಚಿತ್ರಕ್ಕೆ ನನ್ನ ಸಾಮರ್ಥ್ಯ ಸಹ ಹೆಚ್ಚಾಗುತ್ತಿದೆ. 'ರಾಜ್ ದಿ ಶೋ ಮ್ಯಾನ್' ಹಾಗೂ 'ಪೃಥ್ವಿ' ಚಿತ್ರಗಳು ಇನ್ನೂ ಉತ್ತಮವಾಗಿ ಮೂಡಿಬರಬೇಕಾಗಿತ್ತು. ಆದರೆ ನಿರ್ದೇಶಕರ ದೃಷ್ಟಿಕೋನವನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕಾಗುತ್ತದೆ. 'ಪೃಥ್ವಿ'ಯಂತಹ ಉತ್ತಮ ಚಿತ್ರ ಕೊಟ್ಟ ಜಾಕಬ್ ವರ್ಗೀಸ್ ಜೊತೆ ಮತ್ತೊಮ್ಮೆ ಕೆಲಸ ಮಾಡಬೇಕೆಂದಿದ್ದೇನೆ.
'ಪೃಥ್ವಿ' ಚಿತ್ರವನ್ನು ನೋಡಿದ ಹೊರ ರಾಜ್ಯದ ನಿರ್ದೇಶಕರು ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. ಅತ್ಯುತ್ತಮ ಚಿತ್ರಗಳಲ್ಲಿ ಅಭಿನಯಿಸಬೇಕು ಎಂಬುದು ನನ್ನ ನಿಯಮ. ಚಿತ್ರದ ಬಜೆಟ್ ಮುಖ್ಯವಲ್ಲ. ಚಿತ್ರವನ್ನು ಹೇಗೆ ತಯಾರಿಸ ಬೇಕು ಎಂಬುದು ಮುಖ್ಯ. 'ಪೃಥ್ವಿ' ಒಂದು ಪ್ರಯೋಗಾತ್ಮಕ ಚಿತ್ರ ಎನ್ನಬಹುದು ಎಂದಿದ್ದಾರೆ ಪುನೀತ್.