Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾತಿನ ಲೇಪನ ನಂತರ ವಿದೇಶಕ್ಕೆ ಹಾರಿದ ನಂದ
ಆನಂದದಿಂದ ಮಾತಿನ ಭಾಗದ ಚಿತ್ರೀಕರಣ ಮುಗಿಸಿದ ನಂದ ಹಾಡಿನ ಚಿತ್ರೀಕರಣಕ್ಕಾಗಿ ಮೂರುದಿನ ವಿದೇಶಯಾತ್ರೆ ನಡೆಸಲಿದ್ದಾನೆ ಎಂದು ನಿರ್ಮಾಪಕ ಮಾಹಿನ್ ತಿಳಿಸಿದ್ದಾರೆ. ನಿರ್ದೇಶಕರ ಕಾರ್ಯವೈಖರಿಗೆ ಮನಸೋತ್ತಿರುವ ನಿರ್ಮಾಪಕರು ಅನಂತರಾಜು ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. 30ದಿನಗಳ ಎರಡನೇ ಹಂತದ ಚಿತ್ರೀಕರಣ ಮುಗಿಸಿರುವ ನಿರ್ದೇಶಕರು ಚಿತ್ರೀಕರಣೇತರ ಚಟುವಟಿಕೆಗಳಿಗೆ ಅಣಿಯಾಗುತ್ತಿದ್ದಾರೆ.
ಕೆ.ಕೆ.ಮೂವೀಸ್ ಲಾಂಛನದಲ್ಲಿ ಮಾಹಿನ್ ಅವರು ನಿರ್ಮಿಸುತ್ತಿರುವ ನಂದ ಚಿತ್ರಕ್ಕೆ ಅನಂತರಾಜು ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನದ ಹೊಣೆ ಹೊತ್ತಿದ್ದಾರೆ. ರಮೇಶ್ಬಾಬು ಛಾಯಾಗ್ರಹಣ, ವಿ.ಮನೋಹರ್ ಸಂಗೀತ, ಎಸ್.ಮನೋಹರ್ ಸಂಕಲನ, ಮಾಹಿನ್ ಕತೆ, ಪಳನಿರಾಜ್ ಸಾಹಸ, ಇಸ್ಮಾಯಿಲ್ ಕಲೆ, ದೇವರಾಜ್ ಪಾಲನ್ ಸಹನಿರ್ದೇಶನ ಹಾಗೂ ರಾಮು, ಗಂಡಸಿರಾಜು ನಿರ್ಮಾಣನಿರ್ವಹಣೆಯಿರುವ ಚಿತ್ರದ ತಾರಾಬಳಗದಲ್ಲಿ ಶಿವರಾಜಕುಮಾರ್, ಸಂಧ್ಯಾ, ಮೈತ್ರೇಯಿ, ಶರಣ್, ಮಿಥನ್ತೇಜಸ್ವಿ, ಮಾಹಿನ್, ಜ್ಯೋತಿ, ಶ್ರೀನಾಥ್ ಮುಂತಾದವರಿದ್ದಾರೆ.
(ದಟ್ಸ್ ಸಿನಿವಾರ್ತೆ)
'ನಂದ' ಚಿತ್ರದಲ್ಲಿ ಶಿವಣ್ಣನ ಮೇಲೆ ಕೊಲೆ ಆರೋಪ