Don't Miss!
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಶೋಧನೆಗೆ ರಾಘು, ಶಿವಣ್ಣ, ಪುನೀತ್ ದೇಹದಾನ
ರಕ್ತದಾನ, ನೇತ್ರದಾನ ಮಾಡುವ ನಟರನ್ನು ನೋಡಿದ್ದೇವೆ. ಆದರೆ ವೈದ್ಯಕೀಯ ಸಂಶೋಧನೆಗಾಗಿ ತಮ್ಮ ದೇಹವನ್ನು ದಾನ ಮಾಡಿದ ಒಂದೇ ಕುಟುಂಬದ ನಟರನ್ನು ಕಂಡಿದ್ದೀರಾ? ಈ ಮಹತ್ವದ ಕೈಂಕರ್ಯಕ್ಕೆ ನಟ ರಾಘವೇಂದ್ರ ರಾಜ್ ಕುಮಾರ್ ಮುಂದಾಗಿದ್ದಾರೆ. ಸಂಶೋಧನೆಗಾಗಿ ತಮ್ಮ ದೇಹವನ್ನು ದಾನ ಮಾಡುತ್ತಿರುವುದಾಗಿ ಅವರು ಘೋಷಿಸಿದ್ದಾರೆ.
ಕೇವಲ ತಾವಷ್ಟೇ ಅಲ್ಲದೆ ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಸಹ ಸಂಶೋಧನೆಗಾಗಿ ದೇಹದಾನ ಮಾಡಲು ನಿರ್ಧರಿಸಿರುವುದಾಗಿ ರಾಘವೇಂದ್ರ ರಾಜ್ ಕುಮಾರ್ ತಿಳಿಸಿದರು. ಹಿರಿಯೂರು ತಾಲೂಕಿನ ಹರಿಯಬ್ಬೆ ಗ್ರಾಮದಲ್ಲಿ ಏರ್ಪಡಿಸಿದ್ದ ಉಚಿತ ನೇತ್ರ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ರಾಘವೇಂದ್ರ ರಾಜ್ ಕುಮಾರ್ ಮಾತನಾಡುತ್ತಿದ್ದರು.
ನಾರಾಯಣ ನೇತ್ರಾಲಯದ ಅಧ್ಯಕ್ಷ ಡಾ.ಕೆ.ಭುಜಂಗ ಶೆಟ್ಟಿ ಅವರು ಒಮ್ಮೆ ತಮ್ಮ ಮನೆಗೆ ಬಂದು ಅಪ್ಪಾಜಿ ಅವರನ್ನು ತಮ್ಮ ಕಣ್ಣುಗಳನ್ನು ದಾನ ಮಾಡಿ ಎಂದು ಕೇಳಿಕೊಂಡಿದ್ದರು. ಆಗ ಅಪ್ಪಾಜಿ ಅವರು ಒಂದು ಕಣ್ಣು ದಾನ ಮಾಡಲು ಮುಂದಾಗಿದ್ದರು. ಆಗ ಶೆಟ್ಟರು ತಾವು ನಿಧನರಾದ ಬಳಿಕ ಮಾಡಿ ಎಂದು ಅಪ್ಪಾಜಿ ಅವರಿಗೆ ಹೇಳಿದ್ದನ್ನು ನೆನಪಿಸಿಕೊಂಡರು.
ಆ ಸಂದರ್ಭದಲ್ಲಿ ಅಪ್ಪಾಜಿ ಮಾತನಾಡುತ್ತಾ, ಕಳೆದ 60 ವರ್ಷಗಳಿಂದ ಈ ಕಣ್ಣುಗಳಿಂದ ಸಾಕಷ್ಟು ನೋಡಿದ್ದೇನೆ. ನನಗೆ ಒಂದು ಕಣ್ಣು ಸಾಕು ಮತ್ತೊಂದನ್ನು ಯಾರಿಗಾದರೂ ನೀಡಿ ಎಂದು ಶೆಟ್ಟರ ಬಳಿ ಕೋರಿಕೊಂಡಿದ್ದನ್ನು ರಾಘವೇಂದ್ರ ರಾಜ್ ಕುಮಾರ್ ಸ್ಮರಿಸಿಕೊಂಡರು. ಕಾರ್ಯಕ್ರಮದಲ್ಲಿ ಹಿರಿಯ ನಟ ದೊಡ್ಡಣ್ಣ, ಡಾ.ರಾಜ್ ನೇತ್ರ ಸಂಗ್ರಹಣಾ ಕೇಂದ್ರದ ಸಂಚಾಲಕ ಎಚ್ ಮಂಜುನಾಥ್ ಉಪಸ್ಥಿತರಿದ್ದರು.
ಇತ್ತೀಚೆಗೆ ಕಮ್ಯುನಿಸ್ಟ್ ಧುರೀಣ ಜ್ಯೋತಿ ಬಸು ನಿಧನರಾದಾಗ ಅವರ ಇಚ್ಛೆಯಂತೆ ಅವರ ದೇಹವನ್ನು ಆಸ್ಪತ್ರೆಗೆ ದಾನ ಮಾಡಲಾಗಿತ್ತು. ಬಸು ಅವರು ತಮ್ಮ ಕಣ್ಣುಗಳನ್ನು ಕೂಡ ದಾನ ಮಾಡಿದ್ದನ್ನು ಸ್ಮರಿಸಬಹುದು. ರಕ್ತ ದಾನ ಮಹಾದಾನ ಎನ್ನುತ್ತಾರೆ, ನೇತ್ರದಾನ ದಾನಗಳಲ್ಲೇ ದಾನ ಹಾಗೆಯೇ ಶರೀರ ದಾನ ಎಂಬುದು ಸರ್ವಸ್ವ ದಾನ ಎಂಬ ಮಾತಿದೆ. ಈ ಮಾತನ್ನು ರಾಘವೇಂದ್ರ ರಾಜ್ ಕುಮಾರ್ ಅಕ್ಷರಶಃ ಪಾಲಿಸಲು ಮುಂದಾಗಿರುವುದು ಮೆಚ್ಚತಕ್ಕ ಸಂಗತಿ.