Don't Miss!
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- News India Unemployment: ದೇಶದಲ್ಲಿ ಯುವ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ: ಬೆಚ್ಚಿಬೀಳಿಸುವ ವರದಿ ಬಹಿರಂಗ!
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪನೋರಮಾಗೆ ಕನ್ನಡದ ಮೂರು ಚಿತ್ರಗಳು
ನವದೆಹಲಿ, ಅ.25: ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಭಾರತೀಯ ಪನೋರಮಾ ವಿಭಾಗಕ್ಕೆ ಈ ಬಾರಿ 3 ಕನ್ನಡ ಚಿತ್ರಗಳು ಆಯ್ಕೆಯಾಗಿವೆ. ಗಿರೀಶ್ ಕಾಸರವಳ್ಳಿ ನಿರ್ದೇಶನದ 'ಗುಲಾಬಿ ಟಾಕೀಸ್', ಉಮಾಶಂಕರ ಸ್ವಾಮಿ ಅವರ 'ಬನದ ನೆರಳು' ಹಾಗೂ ಅಭಯ ಸಿಂಹ ನಿರ್ದೇಶನದ 'ಗುಬ್ಬಚ್ಚಿಗಳು' ಪನೋರಮಾಗೆ ಆಯ್ಕೆಯಾದ ಚಿತ್ರಗಳು.
ಪನೋರಮಾಗೆ ಆಯ್ಕೆಯಾಗಿರುವ 20 ಸಾಕ್ಷ್ಯ ಚಿತ್ರಗಳಲ್ಲಿ ಕನ್ನಡದ 'ಪುಟ್ಟಿ' ಚಿತ್ರಕ್ಕೂ ಸ್ಥಾನ ದೊರಕಿದೆ. ಈ ಚಿತ್ರವನ್ನು ಜೇಕಬ್ ವರ್ಗೀಸ್ ನಿರ್ದೇಶಿಸಿದ್ದಾರೆ. ಈ ವರ್ಷ ಪನೋರಮಾಗೆ ಕನ್ನಡದ ಮೂರು ಚಿತ್ರಗಳು ಆಯ್ಕೆಯಾಗಿರುವುದು ವಿಶೇಷ. ಮಲೆಯಾಳಂನ ಆರು ಚಿತ್ರಗಳು ಪನೋರಮಾಗೆ ಆಯ್ಕೆಯಾಗಿವೆ.
ತೀರ್ಪುಗಾರರ ಸಮಿತಿ ಒಟ್ಟು 104 ಕಥಾಚಿತ್ರಗಳುಹಾಗೂ 82 ಸಾಕ್ಷ್ಯ ಚಿತ್ರಗಳನ್ನು ವೀಕ್ಷಿಸಿ 25 ಕಥಾಚಿತ್ರಗಳನ್ನು ಹಾಗೂ 20 ಸಾಕ್ಷ್ಯ ಚಿತ್ರಗಳನ್ನು ಪನೋರಮಾಗೆ ಆಯ್ಕೆ ಮಾಡಿದ್ದಾರೆ. ಕನ್ನಡದವರೇ ಆದ ಕೋಲಾರ ಮೂಲದ ಕೆ.ಎನ್.ಟಿ.ಶಾಸ್ತ್ರಿಕಥಾ ಚಲನಚಿತ್ರಗಳ ಆಯ್ಕೆ ಸಮಿತಿಯ ಅಧ್ಯಕ್ಷರು. ಸಿನಿಮಾ, ಕಥಾವಸ್ತು, ಸೌಂದರ್ಯ ಪ್ರಜ್ಞೆಯ ಮೌಲ್ಯಗಳನ್ನು ಬಿಂಬಿಸುವ ಚಿತ್ರಗಳನ್ನು ಆಯ್ಕೆ ಮಾಡಬೇಕೆಂಬ ಉದ್ದೇಶವನ್ನು ಪನೋರಮಾ ಹೊಂದಿದೆ.
(ದಟ್ಸ್ ಕನ್ನಡ ಸಿನಿವಾರ್ತೆ)