Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಲೇಷಿಯಾದಲ್ಲಿ ಸುದೀಪ್, ಐಂದ್ರಿತಾ ತಕಧಿಮಿತಾ!
ವೀರ ಪರಂಪರೆ ಚಿತ್ರತಂಡ ಮಲೇಷ್ಯಾಗೆ ಪ್ರಯಾಣ ಬೆಳಸಿದೆ. ಮಲೇಷಿಯಾದ ಸುಂದರ ತಾಣಗಳಲ್ಲಿ ಹಾಡೊಂದರ ಚಿತ್ರೀಕರಣ ನಡೆಯಲಿದ್ದು ಚಿತ್ರದ ನಾಯಕ ನಟ ಸುದೀಪ್ ಮತ್ತು ನಾಯಕಿ ತಕಧಿಮಿತಾ ಎಂದು ಕುಣಿಯಲಿದ್ದಾರೆ. ಮುರಳಿ ನೃತ್ಯ ನಿರ್ದೇಶನದಲ್ಲಿ ಈ ಹಾಡಿನ ಚಿತ್ರೀಕರಣ ಸಾಂಗವಾಗಿ ಸಾಗಲಿದೆ.
ಕಲಾ ಸಾಮ್ರಾಟ್ ಎಸ್ ನಾರಾಯಣ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ 30ನೇ ಚಿತ್ರವಿದು. ಈಗಾಗಲೆ ಚಿತ್ರದ ಪ್ರಥಮ ಪ್ರತಿ ಸಿದ್ಧವಾಗಿದೆ. ವಿಶೇಷ ಹಾಡೊಂದನ್ನು ಚಿತ್ರಕ್ಕೆ ಸೇರ್ಪಡೆ ಮಾಡಲಾಗುತ್ತಿದ್ದು, ಹಾಡಿನ ಚಿತ್ರೀಕರಣದ ಬಳಿಕ 'ವೀರ ಪರಂಪರೆ' ಸೆನ್ಸಾರ್ ಗೆ ತೆರಳಲಿದೆ.
ಶ್ರೀ ಚೆಲುವಾಂಬಿಕಾ ಪಿಕ್ಚರ್ಸ್ ಲಾಂಛನದಲ್ಲಿ ಎಸ್ ನಾರಾಯಣ್ ನಿರ್ಮಿಸುತ್ತಿರುವ ಚಿತ್ರ ಇದಾಗಿದೆ. ಕತೆ, ಚಿತ್ರಕತೆ, ಸಂಭಾಷಣೆ ಮತ್ತು ನಿರ್ದೇಶನದ ಜವಾಬ್ದಾರಿಯನ್ನು ನಾರಾಯಣ್ ಹೊತ್ತಿರುವುದು ವಿಶೇಷ. ಈಗಾಲೆ ಗುಲ್ಬರ್ಗ, ಬೆಳಗಾವಿ, ಕಿತ್ತೂರು ಮತ್ತು ಮೈಸೂರಿನಲ್ಲಿ 150 ದಿನಗಳ ಕಾಲ ಚಿತ್ರೀಕರಣ ನಡೆದಿದೆ.
ಈ ಚಿತ್ರದಲ್ಲಿ ಇದೇ ಮೊದಲ ಬಾರಿಗೆ ರೆಬಲ್ ಸ್ಟಾರ್ ಅಂಬರೀಷ್ ಜೊತೆ ಸುದೀಪ್ ನಟಿಸುತ್ತಿದ್ದಾರೆ. ಅಂಬರೀಷ್ ಅವರ ಮಡದಿಯಾಗಿ ವಿಜಯಲಕ್ಷ್ಮಿ ಸಿಂಗ್ ಚಿತ್ರದಲ್ಲಿ ಕಾಣಿಸಲಿದ್ದಾರೆ. ವಿ ಹರಿಕೃಷ್ಣ ಸಂಗೀತ ಸಂಯೋಜನೆ, ಆರ್ ಗಿರೀಶ್ ಛಾಯಾಗ್ರಹಣ ಚಿತ್ರಕ್ಕಿದೆ.