Don't Miss!
- News ಹಳೇ ಹುಲಿ ಪಿಸಿ ಮೋಹನ್ ಎದುರು ಮನ್ಸೂರ್ ಅಲಿ ಖಾನ್ ಕಣಕ್ಕೆ; ಮತ್ತೊಮ್ಮೆ ಇತಿಹಾಸ ಬರೆಯುತ್ತಾರಾ ಬಿಜೆಪಿ ಕಲಿ?
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ 'ಬೆಳ್ಳಿಹಬ್ಬ': 25 ವರ್ಷದ ಪಯಣದ ಬಗ್ಗೆ ಕಿಚ್ಚನ ಭಾವುಕ ಮಾತು
ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಕಿಚ್ಚ ಸುದೀಪ್ ಅವರಿಗಾಗಿ ಇಂದು (ಮಾರ್ಚ್ 15) 'ಸುದೀಪ್ ಬೆಳ್ಳಿಹಬ್ಬ' ಆಯೋಜಿಸಲಾಗಿತ್ತು. ಸಿಎಂ ಯಡಿಯೂರಪ್ಪ, ನಟ ಶಿವರಾಜ್ ಕುಮಾರ್, ರವಿಚಂದ್ರನ್, ರಮೇಶ್ ಅರವಿಂದ್, ರವಿಶಂಕರ್, ನಿರ್ದೇಶಕ ಸುನಿಲ್ ಕುಮಾರ್ ದೇಸಾಯಿ ಹಾಗೂ ಇನ್ನೂ ಕೆಲವು ಸಿನಿ ಹಾಗೂ ರಾಜಕೀಯ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Recommended Video
ಕಾರ್ಯಕ್ರಮದಲ್ಲಿ ಮಾತನಾಡಿದ ಕಿಚ್ಚ ಸುದೀಪ್, 'ನನಗಿಂತಲೂ ಹಿರಿಯರು ಇಲ್ಲಿದ್ದಾರೆ. ನನಗಿಂತಲೂ ಮುಂಚೆ ಅವರು ಸಿನಿಯಾನ ಆರಂಭಿಸಿದ್ದಾರೆ, ಅವರ ನೆರಳಿನಲ್ಲಿ ನಾನು ಸಾಗಿಬಂದಿದ್ದೇನೆ' ಎಂದರು.
'ಕನ್ನಡ ಸಿನಿಮಾರಂಗದ ಅದ್ಭುತ ಇತಿಹಾಸದಲ್ಲಿ ನನ್ನನ್ನೂ ಒಂದು ಪುಟವಾಗಲು ಅವಕಾಶ ಮಾಡಿಕೊಟ್ಟ ಎಲ್ಲರಿಗೂ ನಾನು ಋಣಿಯಾಗಿರುತ್ತೇನೆ. ಈಗ ಹಿಂತಿರುಗಿ ನೋಡಿದಾಗ ನಾನು ನೀಡಿದ ಹಿಟ್ ಸಿನಿಮಾಗಳು ಗಳಿಸಿದ ಲಾಭ ಯಾವುದೂ ನೆನಪಿಗೆ ಬರುವುದಿಲ್ಲ. ಬದಲಿಗೆ ಸಿನಿಮಾ ಕಟ್ಟಿಕೊಟ್ಟ ಸುಂದರ ನೆನಪುಗಳು ಮಾತ್ರವೇ ಕಣ್ಣ ಮುಂದೆ ಮೂಡುತ್ತವೆ' ಎಂದರು ಸುದೀಪ್.
'ಚಿತ್ರರಂಗದಲ್ಲಿ 25 ವರ್ಷ ಪೂರೈಸಿರುವುದು ನಾನೊಬ್ಬನೇ ಅಲ್ಲ. ನಾನು 25 ವರ್ಷ ಪೂರೈಸಲು ಹಲವಾರು ಮಂದಿ ಪರೋಕ್ಷವಾಗಿ. ಪ್ರತ್ಯಕ್ಷವಾಗಿ ಸಹಾಯ ಮಾಡಿದ್ದಾರೆ. ನನ್ನೊಂದಿಗೆ ಅವರೂ ಸಿನಿಪಯಣ ಮಾಡಿದ್ದಾರೆ ಅವರೆಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ' ಎಂದರು ಸುದೀಪ್.
ಸಿನಿಮಾ ರಂಗದ ಆರಂಭದ ದಿನಗಳಲ್ಲಿ ತಮಗೆ ಸಹಾಯ ಮಾಡಿದ ವ್ಯಕ್ತಿಗಳನ್ನು, ತಾವು ಆದರ್ಶ ಅಂದುಕೊಂಡಿದ್ದ ವ್ಯಕ್ತಿಗಳನ್ನು ಸುದೀಪ್ ಅವರು ನೆನಪಿಸಿಕೊಂಡರು ಸುದೀಪ್. ಕೊರೊನಾ ಸಮಯದಲ್ಲಿ ಚಿತ್ರರಂಗಕ್ಕೆ ಸಹಾಯ ಮಾಡಿದ ಯಡಿಯೂರಪ್ಪ ಅವರಿಗೆ ವಿಶೇಷ ಧನ್ಯವಾದವನ್ನು ಸುದೀಪ್ ಹೇಳಿದರು.