Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಧೂಳ್'ಎಬ್ಬಿಸಲಿದ್ದಾರೆ ಯೋಗೀಶ್, ಅಂದ್ರಿತಾ ರೇ
ಲೂಸ್ ಮಾದ ಉರುಫ್ ಯೋಗೀಶ್ ಮತ್ತೊಂದು ತಮಿಳು ರೀಮೇಕ್ ಚಿತ್ರದಲ್ಲಿ ನಟಿಸಲಿದ್ದಾರೆ. ಈಗಾಗಲೇ ತಮಿಳು ನಟ ಧನುಷ್ ನಟಿಸಿದ 'ಕಾದಲ್ ಕೋಂಡೇನ್' ಮತ್ತು 'ಪೊಲ್ಲದವನ್' ಚಿತ್ರಗಳು ಕನ್ನಡಕ್ಕೆ ರೀಮೇಕ್ ಆಗಿವೆ. ಈಗ 'ತಿರುವಿಲೆಯಾದಲ್ ಆರಂಭಂ' ಎಂಬ ತಮಿಳು ಚಿತ್ರ ಕನ್ನಡಕ್ಕೆ ರೀಮೇಕ್ ಆಗುತ್ತಿದೆ. ತಮಿಳಿನಲ್ಲಿ ಧನುಷ್, ಶ್ರಿಯಾ ಮತ್ತು ಪ್ರಕಾಶ್ ರಾಜ್ ಮುಖ್ಯ ಭೂಮಿಕೆಯಲ್ಲಿದ್ದರು.
ಯೋಗೀಶ್ ರ ಹೊಸ ರೀಮೇಕ್ ಚಿತ್ರಕ್ಕೆ 'ಧೂಳ್'ಎಂದು ಹೆಸರಿಡಲಾಗಿದೆ. ಜುಲೈನಲ್ಲಿ ಈ ಚಿತ್ರ ಸೆಟ್ಟೇರಲಿದೆ. ಖ್ಯಾತ ನಿರ್ದೇಶಕ ಎಂ ಎಸ್ ರಾಜಶೇಖರ್ ಅವರ ಮಗ ಎಂ ಆರ್ ರಾಘವೇಂದ್ರ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಚಿತ್ರವನ್ನು ಸುನಿಲ್ ನಿರ್ಮಿಸುತ್ತಿದ್ದು ಚಿಗರೆ ಕಂಗಳ ನಟಿ ಅಂದ್ರಿತಾ ರೇ ನಾಯಕಿ.
'ಮುಂಗಾರು ಮಳೆ' ಖ್ಯಾತಿಯ ಕೃಷ್ಣ ಅವರ ಛಾಯಾಗ್ರಹಣ, ವಿ ಹರಿಕೃಷ್ಣ ಸಂಗೀತ ಸಂಯೋಜನೆ ಮತ್ತು ದೀಪು ಎಸ್ ಕುಮಾರ್ ಅವರ ಸಂಕಲನ ಚಿತ್ರಕ್ಕಿದೆ. ತಮಿಳು ನಟ ಧನುಷ್ ರ ಎಲ್ಲ ಚಿತ್ರಗಳನ್ನು ಕನ್ನಡಕ್ಕೆ ಭಟ್ಟಿ ಇಳಿಸಲಾಗುತ್ತಿದೆ. ಹಾಗಾಗಿ ಯೋಗೀಶ್ ಸದ್ಯಕ್ಕೆ ಬಿಜಿ.
(ದಟ್ಸ್ ಕನ್ನಡ ಚಿತ್ರವಾರ್ತೆ)