Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೈಯಲ್ಲಿ ಸಾರಾಯಿ ಬಾಟಲಿ ಹಿಡಿದ ದೇವದಾಸ
ಈಗಾಗಲೆ ದೇವದಾಸ ಹಲವು ಭಾಷೆಗಳಲ್ಲಿ ತೆರೆಗೆ ಬಂದು ಹೋಗಿದ್ದಾನೆ. ಆದರೆ ಕನ್ನಡದಲ್ಲಿ ಬರುತ್ತಿರುವ 'ದೇವದಾಸ' ಕೊಂಚ ಭಿನ್ನವಾಗಿರುತ್ತಾನೆ.ಆದರೆ ಕೈಯಲ್ಲಿ ಸಾರಾಯಿ ಬಾಟಲಿ ಇರುವುದಿಲ್ಲವೆ?ಎಂದು ಕೇಳಬೇಡಿ, ಖಂಡಿತ ಇರುತ್ತದೆ ಎನ್ನುತ್ತಾರೆ ಚಿತ್ರದ ನಿರ್ದೇಶಕ ಎಬಿಸಿಡಿ ಶಾಂತಕುಮಾರ್.
ಈ ದೇವದಾಸ ಸಾಫ್ಟ್ವೇರ್ ಇಂಜಿನಿಯರ್. ತಾನು ಪ್ರೀತಿಸುತ್ತಿರುವ ಹುಡುಗಿಯನ್ನು ಗೋಣಿ ಚೀಲದಲ್ಲಿ ಹಾಕಿಕೊಂಡು ತಿರುಗುತ್ತಿರುತ್ತಾನೆ . ಜೊತೆಗೆ ಅವನ ಪ್ರೀತಿಯ ನಾಯಿಯೂ ಇರುತ್ತದೆ. ಇವನು ಯಾಕೆ ಹೀಗಾದ. ಇವನ ಕೈಗೆ ಸಾರಾಯಿ ಬಾಟಲಿ ಏಕೆ ಬಂತು ಎಂಬ ಪ್ರಶ್ನೆಗಳಿಗೆ ಉತ್ತರ ತೆರೆಯ ಮೇಲೆಯೇ ಸಿಗಲಿದೆ.
ಚಿತ್ರದ ನಿರ್ದೇಶಕರು ಚಿತ್ರಕತೆಯನ್ನು ಐದು ವರ್ಷಗಳ ಹಿಂದೆಯೇ ಹೆಣೆದಿದ್ದರಂತೆ. ಆದರೆ ಅವರ ಅಭಿರುಚಿಯ ನಾಯಕ ಸಿಗದೆ ಸುಮ್ಮನಾಗಿದ್ದರಂತೆ. ಲೂಸ್ ಮಾದ ಯೋಗೀಶ್ನನ್ನು ನೋಡಿದ ಬಳಿಕ 'ದೇವದಾಸ' ಚಿತ್ರಕ್ಕೆ ಮರು ಜೀವ ಬಂತು ಎನ್ನುತ್ತಾರೆ ಶಾಂತಕುಮಾರ್.
ಆಧುನಿಕ ದೇವದಾಸನಿಗೆ ಪಾರು ಆಗಿ ಜಿನಾಲ್ ಪಾಂಡೆ ಎಂಬ ದಂತದ ಗೊಂಬೆ ಅಭಿನಯಿಸಿದ್ದಾರೆ. ಈ ಚಿತ್ರ ಮಾರ್ಚ್ ತಿಂಗಳಲ್ಲಿ ಬಿಡುಗಡೆಯಾಗಲಿದೆ. ಜೋಶ್ವಾ ಶ್ರೀಧರ್ ಅವರ ಸಂಗೀತ, ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ ಚಿತ್ರಕ್ಕಿದೆ.ನೇತಾನ್ಯ, ಚಿತ್ರದ ಮತ್ತೊಬ್ಬ ನಾಯಕಿ. ಸ್ವಸ್ತಿಕ್ ಮುನಿರಾಜು ಹಾಗೂ ಎಚ್ ಎಂ ಕೃಷ್ಣಮೂರ್ತಿ ನಿರ್ಮಾಪಕರು. [ಲೂಸ್ ಮಾದ]