Don't Miss!
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ಯ ಸಭಾ ಸದಸ್ಯತ್ವಕ್ಕೆ ಜಯಶ್ರೀ ಕನ್ನಡದಲ್ಲಿ ಪ್ರಮಾಣ
ರಾಜ್ಯಸಭೆಯಲ್ಲಿ ಇಂದು ಪ್ರಶ್ನೋತ್ತರ ಅವಧಿಯ ಕಲಾಪಕ್ಕೂ ಮುನ್ನ ಬಿ ಜಯಶ್ರೀ ಪ್ರಮಾಣ ವಚನ ಸ್ವ್ವೀಕರಿಸಿ ರಾಜ್ಯಸಭೆ ಸದಸ್ಯತ್ವವನ್ನು ಸ್ವೀಕರಿಸಿದರು. ಏಪ್ರಿಲ್ 15ರಂದೇ ಜಯಶ್ರೀ ಅವರು ಪ್ರಮಾಣ ವಚನ ಸ್ವೀಕರಿಸಬೇಕಾಗಿತ್ತು. ಆದರೆ ಬಾಲಿವುಡ್ ನ 'ಲಕ್ಕಿ' ಚಿತ್ರದಲ್ಲಿ ಅಭಿನಯಿಸುತ್ತಿರುವ ಅವರು ಚಿತ್ರೀಕರಣಕ್ಕಾಗಿ ದಕ್ಷಿಣ ಆಫ್ರಿಕಾಗೆ ತೆರಳಿದ್ದ ಕಾರಣ ಅಂದು ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ.
ಖ್ಯಾತ ರಂಗಕರ್ಮಿ ಗುಬ್ಬಿ ವೀರಣ್ಣ ಅವರ ಮೊಮ್ಮಗಳಾದ ಜಯಶ್ರೀ(60) ರಂಗಭೂಮಿಯಲ್ಲಿ ನಿರ್ದೇಶಕಿಯಾಗಿ, ನಟಿಯಾಗಿ, ಗಾಯಕಿಯಾಗಿ ಸಾಕಷ್ಟು ಪ್ರಯೋಗಗಳಿಗೆ ತಮ್ಮನ್ನು ತೊಡಗಿಕೊಂಡವರು.ರಂಗಭೂಮಿಗೆ ಇನ್ನಷ್ಟು ಸೇವೆ ಸಲ್ಲಿಸಲು ಇದರಿಂದ ಸಾಧ್ಯವಾಗಲಿದೆ. ರಂಗಭೂಮಿಗೆ ನನ್ನ ಕೈಲಾದಷ್ಟು ಸೇವೆ ಸಲ್ಲಿಸುತ್ತೇನೆ ಎಂದಿದ್ದಾರೆ.
ಈ ಹಿಂದೆ ಮೈಸೂರು ರಂಗಾಯಣ ನಿರ್ದೇಶಕಿಯಾಗಿ ನೇಮಕಗೊಂಡಿದ್ದ ಜಯಶ್ರೀ ಅಲ್ಲಿನ ಸಿಬ್ಬಂದಿಯ ಅಸಹಕಾರದಿಂದ ಮನನೊಂದು ಆ ಹುದ್ದೆಗೆ ರಾಜೀನಾಮೆ ನೀಡಿದ್ದರು. ಕಿರುತೆರೆ ಮತ್ತು ಬೆಳ್ಳಿತೆರೆ ಎರಡರಲ್ಲೂ ಜಯಶ್ರೀ ತಮ್ಮದೇ ಆದಂತಹ ಛಾಪನ್ನು ಮೂಡಿಸಿದ್ದಾರೆ. ಕಾರ್ ಕಾರ್ ಕಾರ್ ಎಲ್ನೋಡಿ ಕಾರ್...ಎಂಬ ಸಿನಿಮಾ ಹಾಡಿನ ಮೂಲಕ ಪ್ರೇಕ್ಷಕರಿಗೆ ಮತ್ತಷ್ಟು ಹತ್ತಿರವಾಗಿದ್ದರು. ರಂಗಗೀತೆಗಳನ್ನು ಅಷ್ಟೆ ಸೊಗಸಾಗಿ ಜಯಶ್ರೀ ಅವರು ಹಾಡುತ್ತಾರೆ.