Don't Miss!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Sports PBKS vs MI IPL 2024: ಪಂಜಾಬ್ ರಾಜರಿಗೆ ಮುಂಬೈ ಇಂಡಿಯನ್ಸ್ ಸವಾಲು; ಟಾಸ್ ವರದಿ, ಆಡುವ 11ರ ಬಳಗ
- Lifestyle ಊಟದ ರುಚಿ ಹೆಚ್ಚಿಸುತ್ತೆ ಚೌಳಿಕಾಯಿ ಪಲ್ಯ..! ಹೀಗೆ ಮಾಡಿ
- News Karnataka Lok Sabha Elections: ರಾಷ್ಟ್ರೀಯ ಮುಖಂಡರು VS ರಾಜ್ಯ ನಾಯಕರು; ಗೆಲ್ಲೋದು ಯಾರು?
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ಯ ಸಭಾ ಸದಸ್ಯತ್ವಕ್ಕೆ ಜಯಶ್ರೀ ಕನ್ನಡದಲ್ಲಿ ಪ್ರಮಾಣ
ರಾಜ್ಯಸಭೆಯಲ್ಲಿ ಇಂದು ಪ್ರಶ್ನೋತ್ತರ ಅವಧಿಯ ಕಲಾಪಕ್ಕೂ ಮುನ್ನ ಬಿ ಜಯಶ್ರೀ ಪ್ರಮಾಣ ವಚನ ಸ್ವ್ವೀಕರಿಸಿ ರಾಜ್ಯಸಭೆ ಸದಸ್ಯತ್ವವನ್ನು ಸ್ವೀಕರಿಸಿದರು. ಏಪ್ರಿಲ್ 15ರಂದೇ ಜಯಶ್ರೀ ಅವರು ಪ್ರಮಾಣ ವಚನ ಸ್ವೀಕರಿಸಬೇಕಾಗಿತ್ತು. ಆದರೆ ಬಾಲಿವುಡ್ ನ 'ಲಕ್ಕಿ' ಚಿತ್ರದಲ್ಲಿ ಅಭಿನಯಿಸುತ್ತಿರುವ ಅವರು ಚಿತ್ರೀಕರಣಕ್ಕಾಗಿ ದಕ್ಷಿಣ ಆಫ್ರಿಕಾಗೆ ತೆರಳಿದ್ದ ಕಾರಣ ಅಂದು ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ.
ಖ್ಯಾತ ರಂಗಕರ್ಮಿ ಗುಬ್ಬಿ ವೀರಣ್ಣ ಅವರ ಮೊಮ್ಮಗಳಾದ ಜಯಶ್ರೀ(60) ರಂಗಭೂಮಿಯಲ್ಲಿ ನಿರ್ದೇಶಕಿಯಾಗಿ, ನಟಿಯಾಗಿ, ಗಾಯಕಿಯಾಗಿ ಸಾಕಷ್ಟು ಪ್ರಯೋಗಗಳಿಗೆ ತಮ್ಮನ್ನು ತೊಡಗಿಕೊಂಡವರು.ರಂಗಭೂಮಿಗೆ ಇನ್ನಷ್ಟು ಸೇವೆ ಸಲ್ಲಿಸಲು ಇದರಿಂದ ಸಾಧ್ಯವಾಗಲಿದೆ. ರಂಗಭೂಮಿಗೆ ನನ್ನ ಕೈಲಾದಷ್ಟು ಸೇವೆ ಸಲ್ಲಿಸುತ್ತೇನೆ ಎಂದಿದ್ದಾರೆ.
ಈ ಹಿಂದೆ ಮೈಸೂರು ರಂಗಾಯಣ ನಿರ್ದೇಶಕಿಯಾಗಿ ನೇಮಕಗೊಂಡಿದ್ದ ಜಯಶ್ರೀ ಅಲ್ಲಿನ ಸಿಬ್ಬಂದಿಯ ಅಸಹಕಾರದಿಂದ ಮನನೊಂದು ಆ ಹುದ್ದೆಗೆ ರಾಜೀನಾಮೆ ನೀಡಿದ್ದರು. ಕಿರುತೆರೆ ಮತ್ತು ಬೆಳ್ಳಿತೆರೆ ಎರಡರಲ್ಲೂ ಜಯಶ್ರೀ ತಮ್ಮದೇ ಆದಂತಹ ಛಾಪನ್ನು ಮೂಡಿಸಿದ್ದಾರೆ. ಕಾರ್ ಕಾರ್ ಕಾರ್ ಎಲ್ನೋಡಿ ಕಾರ್...ಎಂಬ ಸಿನಿಮಾ ಹಾಡಿನ ಮೂಲಕ ಪ್ರೇಕ್ಷಕರಿಗೆ ಮತ್ತಷ್ಟು ಹತ್ತಿರವಾಗಿದ್ದರು. ರಂಗಗೀತೆಗಳನ್ನು ಅಷ್ಟೆ ಸೊಗಸಾಗಿ ಜಯಶ್ರೀ ಅವರು ಹಾಡುತ್ತಾರೆ.