Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೈಸೂರು ದಸರಾ ಉತ್ಸವಕ್ಕೆ ಸಿನಿಮಾ ಥಳಕು
ಈ ಬಾರಿಯ ದಸರಾ ಉತ್ಸವದಲ್ಲಿ 14 ಮಕ್ಕಳ ಚಿತ್ರಗಳು ಸೇರಿದಂತೆ ಒಟ್ಟು 77 ಪ್ರಸಿದ್ಧ ಸಿನಿಮಾಗಳು ಪ್ರದರ್ಶನವಾಗಲಿವೆ. ಸೆ.30 ರಿಂದ ಪ್ರಾರಂಭವಾಗುವ ಪ್ರದರ್ಶನವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಮಧ್ಯಾಹ್ನ 12.30ಕ್ಕೆ ಉದ್ಘಾಟಿಸಲಿದ್ದಾರೆ. ಪ್ರದರ್ಶನಗೊಳ್ಳಲಿರುವ ಕನ್ನಡದ 49 ಚಿತ್ರಗಳಲ್ಲಿ ಪ್ರಶಸ್ತಿ ಪಡೆದ 14 ಚಿತ್ರಗಳು ಸೇರಿವೆ. ಇವುಗಳ ಜೊತೆಗೆ ಇಂಗ್ಲಿಷ್ ಚಿತ್ರ ಪ್ರದರ್ಶನವು ಇರುತ್ತದೆ. ಮಕ್ಕಳ ಚಿತ್ರಗಳನ್ನು ಬಾಲಭವನದಲ್ಲಿ ಹಾಗೂ ಉಳಿದ ಚಿತ್ರಗಳನ್ನು ಕಲಾಮಂದಿರದಲ್ಲಿ ಪ್ರದರ್ಶಿಸಲಾಗುತ್ತದೆ.
ಬಾಲ ಮಂದಿರ ಹಾಗೂ ಕಲಾ ಮಂದಿರದಲ್ಲಿ ಪ್ರತಿ ದಿನ ಎರಡು ಚಿತ್ರ ಪ್ರದರ್ಶನಗಳಿರುತ್ತವೆ. ಹಾಗೆಯೇ ಕನ್ನಡ ಚಿತ್ರ ಬೆಳೆದು ಬಂದ ಹಾದಿಯನ್ನು ಬಿಂಬಿಸುವ ಛಾಯಾಚಿತ್ರ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಮೈಸೂರಿನ ಚಿತ್ರಮಂದಿರ, ಕಲಾಮಂದಿರ ಹಾಗೂ ಬಾಲಭವನದಲ್ಲಿ ಛಾಯಾಚಿತ್ರ ಪ್ರದರ್ಶನವಿರುತ್ತದೆ. ಕನ್ನಡ ಚಿತ್ರಗಳನ್ನು ಪ್ರದರ್ಶಿಸಲು ಮೈಸೂರಿನ ಏಳು ಚಿತ್ರಮಂದಿರಗಳನ್ನು ಆಯ್ಕೆ ಮಾಡಲಾಗಿದೆ.
ಉದ್ಘಾಟನಾ ಕಾರ್ಯಕ್ರಮಕ್ಕೆ ವಾರ್ತಾ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ನಟರಾದ ಶ್ರೀನಾಥ್, ಕೆ.ಎಸ್.ಅಶ್ವಥ್, ನಿರ್ದೇಶಕ ಗಿರೀಶ್ ಕಾಸರವಳ್ಳಿ, ಉಮಾಶ್ರೀ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಭಾಗವಹಿಸಲಿದ್ದಾರೆ. ಪ್ರಿಂಟ್ ಗಳ ಕೊರತೆಯ ಕಾರಣ ಹಿಂದಿ ಚಿತ್ರ ಪ್ರದರ್ಶನವನ್ನು ಈ ಬಾರಿ ಕೈಬಿಡಲಾಗಿದೆ ಎಂದು ದಸರಾ ಸಿನಿಮಾ ಉಪ ಸಮಿತಿ ಅಧ್ಯಕ್ಷ ಮದನ್ ಮಲ್ಲು ತಿಳಿಸಿದರು.
ಸೆ.30ರಿಂದ ರಂಗಾಯಣ ಬಿ.ವಿ.ಕಾರಂತ ನವರಾತ್ರಿ ರಂಗೋತ್ಸವವನ್ನು ಒಂಬತ್ತು ದಿನಗಳ ನಡೆಸಲಾಗುತ್ತದೆ. ಪ್ರತಿದಿನ ಮಧ್ಯಾಹ್ನ 3.30ರಿಂದ ಸಂಜೆ 6.30ರ ತನಕ ಪ್ರದರ್ಶನಗಳಿರುತ್ತವೆ. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಗಣ್ಯರನ್ನು ಪ್ರತಿದಿನ ಸನ್ಮಾನಿಸಲಾಗುತ್ತದೆ. ಪ್ರಣಯರಾಜ ಶ್ರೀನಾಥ್ ದಸರಾ ಉತ್ಸವವನ್ನು ಉದ್ಘಾಟಿಸಲಿದ್ದಾರೆ.
(ದಟ್ಸ್ ಕನ್ನಡ ಸಿನಿವಾರ್ತೆ)