Don't Miss!
- News ಮಳೆ.. ಮಳೆ.. ಅಲ್ಲಲ್ಲ ಮುಂದಿನ 1 ವಾರ ಬೆಂಗಳೂರಲ್ಲಿ ಭಾರಿ ಬಿಸಿಲು!
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Lifestyle ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈ ಹಾಸ್ಯ ಚಕ್ರವರ್ತಿಯನ್ನು ಅದೇಗೆ ಮರೆಯಲು ಸಾಧ್ಯ?
ಸಂದರ್ಶನವೊಂದರಲ್ಲೊಮ್ಮೆ "ನಗಿಸುವುದು ನನ್ನ ಕರ್ಮ, ನಗುವುದು ನಿಮ್ಮ ಧರ್ಮ" ಎಂದು ಹೇಳಿಕೊಂಡಿದ್ದ ನರಸಿಂಹರಾಜು ಸಂಭಾಷಣೆಯನ್ನು ದೇಹಭಾಷೆಯೊಂದಿಗೆ ಸಂಯೋಜಿಸಿಕೊಂಡಿದ್ದ ಒಬ್ಬ ಅಪ್ಪಟ ಹಾಸ್ಯ ಕಲಾವಿದ. ಪೌರಾಣಿಕ ಪಾತ್ರದಲ್ಲಿ ರಾಜನ ಗೆಳೆಯನಾಗಿ, ಸಾಮಾಜಿಕ ಪಾತ್ರದಲ್ಲಿ ನಾಯಕನಿಗೆ ಮಿತ್ರನಾಗಿ ಅವರ ಪಾತ್ರ ಇದ್ದೇ ಇರುತ್ತಿತ್ತು.
ಚಿತ್ರಕ್ಕೆ ನಾಯಕ, ನಾಯಕಿಯಂತೆ ಹಾಸ್ಯನಟನ ಪಾತ್ರವೂ ಮುಖ್ಯ ಎನ್ನುವುದನ್ನು ತೋರಿಸಿಕೊಟ್ಟವರು ನರಸಿಂಹರಾಜು. 1926 ರಿಂದ 1979ರ ವರೆಗೆ 250ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ನರಸಿಂಹರಾಜು ತಮ್ಮ ನಾಲ್ಕನೇ ವಯಸ್ಸಿನಲ್ಲೇ ಬಾಲಕಲಾವಿದನಾಗಿ ಬಣ್ಣ ಹಚ್ಚಿಕೊಂಡರು. ರಂಗ ಮಂಚದ ಮೇಲೆ ಬಂದರೆ ಸಾಕು ಪ್ರೇಕ್ಷಕರಿಗೆ ಪುಷ್ಕಳ ಹಾಸ್ಯ ಖಚಿತ. ಡಾ. ರಾಜ್ ಜೊತೆಗೆ 'ಬೇಡರ ಕಣ್ಣಪ್ಪ' ಚಿತ್ರದಮೂಲಕ ಚಿತ್ರರಂಗ ಪ್ರವೇಶಿಸಿದರಾಜು ನಂತರವೂ ರಂಗ ಭೂಮಿಯನ್ನು ಕಡೆಗಣಿಸಲಿಲ್ಲ.
ಜುಲೈ 1926 ರಲ್ಲಿ ಜನಿಸಿದ ಇವರು ನಿಧನಹೊಂದಿದ್ದು ಜುಲೈ 20ರ 1979 ರಂದು. ತಮ್ಮ 56ನೇ ವಯಸ್ಸಿನಲ್ಲಿ ನಸುಕಿನ 4.30 ರ ಸಮಯದಲ್ಲಿ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಇಹಲೋಕ ತ್ಯಜಿಸಿದರು. ಇಂತಹ ಮಹಾನ್ ಹಾಸ್ಯ ಚಕ್ರವರ್ತಿಗೆ ಒಮ್ಮೆಯೂ ರಾಜ್ಯ ಸರಕಾರ ಪ್ರಶಸ್ತಿ ನೀಡಲಿಲ್ಲ ಅಥವಾ ಅವರ ನೆನಪಿಸುವಂತಹ ಯಾವುದೇ ಕೆಲಸ ಮಾಡಿಲ್ಲ ಎನ್ನುವುದು ನೋವಿನ ವಿಷಯ. ಕನ್ನಡಿಗರ ನೆನಪಿನಲ್ಲಿ ಇನ್ನೂ ಮಾಸದ ಈ ಹಾಸ್ಯ ಚಕ್ರವರ್ತಿಯನ್ನು ಸ್ಮರಿಸಲು ಇದೇ ಸೂಕ್ತ ಸಮಯ ಅಲ್ಲವೆ?