Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜುಲೈನಲ್ಲಿ 'ಕೆಂಚ' ಯುವ ಹೃದಯಗಳಿಗೆ ಲಗ್ಗೆ
ರಮೇಶ್
ಯಾದವ್
ಮೂವೀಸ್
ಲಾಂಛನದಲ್ಲಿ
ನಿರ್ಮಾಣವಾಗಿರುವ
'ಕೆಂಚ'
ಚಿತ್ರ
ಜುಲೈ
ಮೊದಲವಾರ
ರಾಜ್ಯಾದ್ಯಂತ
ತೆರೆ
ಕಾಣಲಿದೆ
ಎಂದು
ನಿರ್ಮಾಪಕರು
ತಿಳಿಸಿದ್ದಾರೆ.
ರಮೇಶ್
ಯಾದವ್
ಕನ್ನಡ
ಚಿತ್ರರಂಗದ
ಖ್ಯಾತ
ನಿರ್ಮಾಪಕರು.
ಇಲ್ಲಿಯವರೆಗೂ ಸಾಕಷ್ಟು ಚಿತ್ರಗಳನ್ನು ನಿರ್ಮಿಸಿರುವ ಇವರು 'ಶಾಂತಿ'ಎಂಬ ಗಿನ್ನಿಸ್ ದಾಖಲೆಗೆ ಭಾಜನವಾದ ಚಿತ್ರವನ್ನು ತೆರೆಗಿತ್ತವರು. ನಿರ್ಮಾಣಕ್ಕೆ ಸೀಮಿತರಾಗದ ನಿರ್ಮಾಪಕರು ತಮ್ಮ ಸಂಸ್ಥೆಯ ಹೆಸರಿನಲ್ಲಿ ಆಡಿಯೋ ಕಂಪನಿಯನ್ನು ತೆರೆದರು.'ಕೆಂಚ' ಚಿತ್ರ ಉತ್ತಮ ಪ್ರೇಮಕಥೆಯಿಂದ ಕೂಡಿದ್ದು, ಯುವ ಪ್ರೇಮಿಗಳ ಹೃದಯಕ್ಕೆ ಲಗ್ಗೆ ಹಾಕಲಿದೆ ಹಾಗೂ ಚಿತ್ರದಲ್ಲಿ ಬರುವ ಸಾಹಸ ಸನ್ನಿವೇಶಗಳು ಸಾಹಸಪ್ರಿಯರ ಮೆಚ್ಚುಗೆಗೆ ಪಾತ್ರವಾಗಲಿದೆ ಎಂಬ ಅಭಿಪ್ರಾಯ ರಮೇಶ್ ಯಾದವ್ ಅವರದು.
ಪಿ.ಎನ್.ಸತ್ಯ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ರಾಜೇಶ್ ರಾಮನಾಥ್ ಸಂಗೀತ ನೀಡಿದ್ದಾರೆ. ಪಿ.ಎಲ್.ರವಿ ಛಾಯಾಗ್ರಹಣ, ವರ್ಮನ್ ಸಂಕಲನ, ಮುರುಳಿ, ದೇವ ಸಂಪತ್, ಅರವಿಂದ್ ನೃತ್ಯ ನಿರ್ದೇಶನ, ಪಳನಿರಾಜ್, ಡಿಫರೆಂಟ್ ಡ್ಯಾನಿ ಸಾಹಸ, ರಂಗಸ್ವಾಮಿ ನಿರ್ಮಾಣ ನಿರ್ವಹಣೆಯಿರುವ 'ಕೆಂಚ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಶ್ರೀಪ್ರಜ್ಞ, ಶರತ್ ಲೋಹಿತಾಶ್ವ, ಭವ್ಯ, ಪಿ.ಎನ್.ಸತ್ಯ ಮುಂತಾದವರಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)