Don't Miss!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Automobiles Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳ್ಳಿ ಪರದೆಗೆ ಬರಲಿದೆ ರಘು, ಅನುಷಾ ಪ್ರೇಮ ಪ್ರಕರಣ
ನೈಜ ಪ್ರೇಮ ಪ್ರಕರಣವೊಂದನ್ನು ತೆರೆಗೆ ತರಲಿದ್ದಾರೆ ಕಲಾ ಸಾಮ್ರಾಟ್ ಎಸ್ ನಾರಾಯಣ್. ಚಿತ್ರಕ್ಕೆ ಅವರು 'ನೆನಪಿದೆಯಾ ಓ ಗೆಳತಿ' ಎಂದು ಹೆಸರಿಟ್ಟಿದ್ದಾರೆ. ಇತ್ತೀಚೆಗೆ ರಾಜ್ಯದಾದ್ಯಂತ ರಘು ಮತ್ತು ಅನುಷಾ ಪ್ರೇಮ ಪ್ರಕರಣ ತೀವ್ರ ಸಂಚಲನ ಸೃಷ್ಟಿಸಿತ್ತು. ಈಗ ಇದೇ ಪ್ರಕರಣವನ್ನು ಅವರು ಸಿನಿಮಾ ಮಾಡಲು ಹೊರಟಿದ್ದಾರೆ.
ಅಂದಹಾಗೆ ಈ ಚಿತ್ರಕ್ಕೆ ನಾಯಕ ನಟ ನಾರಾಯಣ್ ಅವರ ಪುತ್ರ ಪಂಕಜ್. ಪ್ರೀತಿಸಿ ಕಣ್ಣು ಕಳೆದುಕೊಂಡ ನತದೃಷ್ಟ ಪಾತ್ರದಲ್ಲಿ ಪಂಕಜ್ ಕಾಣಿಸಲಿದ್ದಾರೆ. ರಘು ಜೀವನದಲ್ಲಿ ನಡೆದ ನೈಜ ಘಟನೆಗಳನ್ನೇ ಇಟ್ಟುಕೊಂಡು ಚಿತ್ರಕಥೆ ಹೆಣೆಯುವುದಾಗಿ ಕಲಾ ಸಾಮ್ರಾಟ್ ತಿಳಿಸಿದ್ದಾರೆ. ರಘು ಗುಣಮುಖರಾದ ಕೂಡಲೆ ಅವರನ್ನು ಸಂಪರ್ಕಿಸಿ ಪೂರ್ಣವಿವರಗಳನ್ನು ಪಡೆಯುತ್ತೇನೆ ಎಂದಿದ್ದಾರೆ ನಾರಾಯಣ್.
ತಮ್ಮ ಚಿತ್ರ ಸಮಾಜದ ಮೇಲೆ ಯಾವುದೇ ಕೆಟ್ಟ ಪರಿಣಾಮ ಬೀರುವುದಿಲ್ಲ. ಬದಲಾಗಿ ಈ ಚಿತ್ರ ಯುವಜನರಿಗೆ ಸಂದೇಶ ನೀಡಲಿದೆ. ಈ ಮೂಲಕ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ನಾರಾಯಣ್ ಭರವಸೆ ನೀಡಿದ್ದಾರೆ. ಸದ್ಯಕ್ಕೆ ನಾರಾಯಣ್ ಘಟನೆಯ ವಿವರಗಳನ್ನು ಕಲೆ ಹಾಕುವಲ್ಲಿ ಮಗ್ನರಾಗಿದ್ದಾರೆ. ಏನಿದು ರಘು ಅನುಷಾ ಪ್ರೇಮ ಪ್ರಕರಣ?