Don't Miss!
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಮೃತ ಮಹೋತ್ಸವಕ್ಕೆ ರಜನಿ ಮತ್ತು ಕಮಲ್!
ಕನ್ನಡ ಚಿತ್ರರಂಗದಲ್ಲಿ ಮಿಂಚಿದ ಪರಭಾಷಾ ತಾರೆಯರು, ಪರಭಾಷೆಗಳಲ್ಲಿ ಮಿಂಚುತ್ತಿರುವ ಕನ್ನಡಿಗರು ಕಾರ್ಯಕ್ರಮದಲ್ಲಿ ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಮಾರ್ಚ್ 1ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸುವರು. ಅಂದು ಹಲವು ಸಚಿವರು, ಕನ್ನಡ ಚಿತ್ರರಂಗದ ದಿಗ್ಗಜರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ನಂತರ ಕನಸುಗಾರ ರವಿಚಂದ್ರನ್ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭವಾಗಲಿವೆ.
ಮಾರ್ಚ್ 2ರಂದು ನಡೆಯುವ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗಕ್ಕೆ ಅಮೂಲ್ಯ ಸೇವೆ ಸಲ್ಲಿಸಿರುವ 108 ಗಣ್ಯರಿಗೆ ಸನ್ಮಾನ ನಡೆಯಲಿದೆ. ಪಾರ್ವತಮ್ಮ ರಾಜ್ ಕುಮಾರ್, ಡಾ.ಬಿ.ಸರೋಜಾದೇವಿ, ಜಯಂತಿ, ಕೆ.ಎಸ್.ಅಶ್ವಥ್, ವಿಷ್ಣುವರ್ಧನ್, ಅಂಬರೀಶ್, ಶ್ರೀನಾಥ್ ಒಳಗೊಂಡಂತೆ ಮುಂತಾದವರನ್ನು ಅಂದು ಸನ್ಮಾನಿಸಲಾಗುತ್ತದೆ.
'ಕನ್ನಡ ಚಿತ್ರಗಳು: ಸೋಲು, ಗೆಲುವು ಮತ್ತು ಸವಾಲು' ಎಂಬ ವಿಚಾರಗೋಷ್ಠಿಗೆ ಸಂಸದ ಅನಂತಕುಮಾರ್ ಮಾರ್ಚ್ 3 ರಂದು ಚಾಲನೆ ನೀಡಲಿದ್ದಾರೆ. ಕನ್ನ್ನಡ ಚಿತ್ರಗಳ ಗುಣಮಟ್ಟ ಕುರಿತು ಗಂಗಾಧರ ಮೊದಲಿಯಾರ್, ಚಿತ್ರ ನಿರ್ಮಾಣದ ಸಮಸ್ಯೆ ಬಗ್ಗೆ ನಟ ದ್ವ್ವಾರಕೀಶ್, ಕನ್ನಡ ಚಿತ್ರರಂಗದ ಮಾರುಕಟ್ಟೆ ಬಗ್ಗೆ ರಾಜೇಂದ್ರ ಸಿಂಗ್ ಬಾಬು, ಚಿತ್ರರಂಗ ಮತ್ತು ಮಾಧ್ಯಮ ಕುರಿತು ಎಸ್.ಎ.ಚಿನ್ನೇಗೌಡ, ಪೈರಸಿ ಬಗ್ಗೆ ಸಾ.ರಾ.ಗೋವಿಂದು ಮಾರ್ಚ್ 3ರಂದು ವಿಷಯ ಮಂಡಿಸುವರು.
ಚಿತ್ರರಂಗಕ್ಕೆ ಸಹಾಯ ಹಸ್ತ ನೀಡುತ್ತಾ ಬಂದಿರುವ ಇತರೆ ಕ್ಷೇತ್ರದ ಗಣ್ಯರನ್ನು ಮಾರ್ಚ್ 3ರಂದು ಸನ್ಮಾನಿಸಲಾಗುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ವೈಭವಯುತ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ತೆರೆ ಬೀಳಲಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ರಾಜ್
ಪುಣ್ಯಭೂಮಿಯಲ್ಲಿ
ಅಮೃತ
ಮಹೋತ್ಸವ
ಕನ್ನಡ
ಸಿನಿಮಾ
75ಕ್ಕೆ
75ಪುಸ್ತಕ:
ಜಯಮಾಲಾ
ಅಮೃತ
ಕಲಶಕ್ಕೆ
ಭಾರತ
ಬಿಂದುಗಳು