Don't Miss!
- News ಬಿಎಂಟಿಸಿ & ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳಕ್ಕೆ ಕಾರಣ ಏನು?-ಇಲ್ಲಿದೆ ಮಾಹಿತಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳು 'ಮಾಯಿ' ರೀಮೇಕ್ನಲ್ಲಿ ಕ್ರೇಜಿ ಸ್ಟಾರ್
ಕ್ರೇಜಿ ಸ್ಟಾರ್ ರವಿಚಂದ್ರನ್ ಮತ್ತೆ ಕ್ರಿಯಾಶೀಲರಾಗಿದ್ದಾರೆ. ಈಗ ಅವರ ಸಾಲು ಸಾಲು ಚಿತ್ರಗಳು ಪ್ರೇಕ್ಷಕರ ಮುಂದೆ ಬರಲು ಸಿದ್ಧತೆ ನಡೆದಿವೆ. ಖ್ಯಾತ ವಿತರಕ ಕೆ ಸಿ ಎನ್ ಕುಮಾರ್ ಚಿತ್ರವೊಂದನ್ನು ನಿರ್ಮಿಸುತ್ತಿದ್ದು, ರವಿಚಂದ್ರನ್ ಚಿತ್ರಕ್ಕೆ ನಾಯಕನಾಗಿ ಆಯ್ಕೆಯಾಗಿದ್ದಾರೆ. ಇನ್ನೂ ಶೀರ್ಷಿಕೆ ಇಡದ ಈ ಚಿತ್ರವನ್ನು ನಟ ಮೋಹನ್ ನಿರ್ದೇಶಿಸಲಿದ್ದಾರೆ.
ರವಿಚಂದ್ರನ್ ಅವರು ಚಿತ್ರಕ್ಕೆ 'ಧರ್ಮರಾಯ' ಎಂಬ ಶೀರ್ಷಿಕೆ ಸೂಚಿಸಿದ್ದಾರೆ. ಆದರೆ ಈ ಶೀರ್ಷಿಕೆ ಇನ್ನೂ ಅಂತಿಮವಾಗಿಲ್ಲ. ನಿರ್ದೇಶನದ ಜೊತೆಗೆ ಚಿತ್ರಕತೆ ಮತ್ತು ಸಂಭಾಷಣೆಯನ್ನು ಮೋಹನ್ ಬರೆದಿದ್ದಾರೆ. ಚಿತ್ರದ ವಿವಿಧ ಪಾತ್ರಗಳ ಆಯ್ಕೆ ನಡೆಯಬೇಕಾಗಿದೆ.
ಅಂದಹಾಗೆ ಈ ಚಿತ್ರ ಶರತ್ ಕುಮಾರ್ ಮತ್ತು ಮೀನಾ ಮುಖ್ಯಭೂಮಿಕೆಯಲ್ಲಿದ್ದ ತಮಿಳಿನ 'ಮಾಯಿ' ಚಿತ್ರದ ರೀಮೇಕ್ ಎನ್ನಲಾಗಿದೆ. ಇದೇ ಚಿತ್ರ ತೆಲುಗಿನಲ್ಲಿ 'ಸಿಂಹ ರಾಶಿ' ಎಂದು ರೀಮೇಕ್ ಆಗಿತ್ತು. ಈಗ ಕನ್ನಡಕ್ಕೆ ತರಲಾಗುತ್ತಿದೆ. ಪ್ರಜ್ವಲ್ ದೇವರಾಜ್ ಮುಖ್ಯಭೂಮಿಕೆಯಲ್ಲಿರುವ 'ಕೋಟೆ' ಚಿತ್ರ ಕೆ ಸಿ ಎನ್ ಕುಮಾರ್ ಸಹ ನಿರ್ಮಾಣದಲ್ಲಿ ಮೂಡಿಬರುತ್ತಿದೆ.