Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
‘ಚಂದಮಾಮ’ ನಾಗಿರೆಡ್ಡಿ ವಿಧಿವಶ
ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳಲ್ಲಿ 50 ಕ್ಕೂ ಹೆಚ್ಚು ಚಿತ್ರಗಳನ್ನು ನಾಗಿರೆಡ್ಡಿ ನಿರ್ಮಿಸಿದ್ದಾರೆ. ನಾಗಿರೆಡ್ಡಿ ಅವರು ಕನ್ನಡದಲ್ಲಿ ನಿರ್ಮಿಸಿರುವ ಸತ್ಯ ಹರಿಶ್ಚಂದ್ರ ಚಿತ್ರ ಅಪಾರ ಜನಪ್ರಿಯತೆ ಗಳಿಸಿದೆ. ವರನಟ ಡಾ.ರಾಜ್ಕುಮಾರ್ ಅಭಿನಯಿಸಿರುವ ಸತ್ಯ ಹರಿಶ್ಚಂದ್ರ ಅಪರೂಪದ ಪೌರಾಣಿಕ ಚಿತ್ರಗಳಲ್ಲೊಂದು. ಜಗದೇಕ ವೀರನ ಕಥೆ, ಮಾಯಾ ಬಜಾರ್ ನಾಗಿರೆಡ್ಡಿ ನಿರ್ಮಾಣದ ಇತರ ಜನಪ್ರಿಯ ಚಿತ್ರಗಳು.
ವಿಜಯ ಪ್ರೊಡಕ್ಷನ್ಸ್ ಮೂಲಕ ಅನೇಕ ಅದ್ದೂರಿ ಚಿತ್ರಗಳನ್ನು ನಿರ್ಮಿಸಿರುವ ನಾಗಿರೆಡ್ಡಿ , ಜಾನಪದ ಕಥಾವಸ್ತುವಿನ ಚಿತ್ರಗಳ ನಿರ್ಮಾಣಕ್ಕೆ ಹೆಚ್ಚಿನ ಒಲವು ಹೊಂದಿದ್ದರು. ದಕ್ಷಿಣ ಭಾರತ ಚಲನಚಿತ್ರ ಮಂಡಳಿ ಅಧ್ಯಕ್ಷರಾಗಿ, ಭಾರತೀಯ ಚಲನಚಿತ್ರ ಮಂಡಳಿ ಅಧ್ಯಕ್ಷರಾಗಿ ನಾಗಿರೆಡ್ಡಿ ಕಾರ್ಯ ನಿರ್ವಹಿಸಿದ್ದರು. 1987ರಲ್ಲಿ ನಾಗಿರೆಡ್ಡಿ ಅವರಿಗೆ ಫಾಲ್ಕೆ ಪ್ರಶಸ್ತಿ ದೊರೆತಿತ್ತು .
ಮಕ್ಕಳಿಗಾಗಿ ನಾಗಿರೆಡ್ಡಿ ಅವರು ತಮ್ಮ ಸಂಸ್ಥೆಯಿಂದ ಪ್ರಕಟಿಸುತ್ತಿದ್ದ ಚಂದಮಾಮ ಪತ್ರಿಕೆ 15 ಭಾರತೀಯ ಭಾಷೆಗಳಲ್ಲಿ ಪ್ರಕಟವಾಗುತ್ತಿತ್ತು .(ಇನ್ಫೋ ವಾರ್ತೆ)