Don't Miss!
- Technology ಜಿಯೋ ನಿವ್ವಳ ಲಾಭದಲ್ಲಿ ಭರ್ಜರಿ ಹೆಚ್ಚಳ: ಇಲ್ಲಿದೆ ವಿವರ
- Lifestyle ಉಪ್ಪು ನೀರಿನಿಂದ ಮುಖ ತೊಳೆದರೆ ಆಗುವ ಲಾಭವೇನು.? ಇದರ ಅನಾನುಕೂಲವೇನು ಗೊತ್ತಾ?
- Finance ಬೆಂಗಳೂರಿಗೆ ಪ್ರತ್ಯೇಕ ನ್ಯಾವಿಗೇಟಿಂಗ್ ಅಪ್ಲಿಕೇಶನ್, ಟೆಕ್ ಕಂಪೆನಿಯೊಂದಿಗೆ ಒಪ್ಪಂದ
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- News Bengaluru Heat Wave: ಮಳೆಯ ನಡುವೆ ಮತ್ತೆ ದಾಖಲೆಯ ಗರಿಷ್ಠ ತಾಪಮಾನ: ಶಾಖದ ಅಲೆ ಮುನ್ಸೂಚನೆ
- Automobiles Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಿಮ್ಮಪ್ಪನಿಗೆ ರು.15 ಕೋಟಿ ಭೂದಾನ ಮಾಡಿದ ನಟಿ
ಸಿನಿಮಾ ತಾರೆಗಳು ತಿರುಪತಿ ತಿಮ್ಮಪ್ಪನಿಗೆ ಅಡ್ಡ ಬಿದ್ದು ಏನೋ ತಮ್ಮ ಕೈಲಾದ ಕಾಣಿಕೆ ನೀಡುವುದನ್ನು ಕೇಳಿದ್ದೇವೆ. ಆದರೆ ಈ ನಟಿ ಮಾತ್ರ ರು.15 ಕೋಟಿ ಬೆಲೆ ಬಾಳುವ ಭೂಮಿಯನ್ನು ದಾನ ಮಾಡಿದ್ದಾರೆ. ಈಕೆ ಬೇರಾರು ಅಲ್ಲ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಎಪ್ಪತ್ತರ ದಶಕದಲ್ಲಿ ಮಿಂಚಿದ್ದ ಚತುರ್ಭಾಷಾ ತಾರೆ ಕಾಂಚನಾ.
ಈ ಹಿರಿಯ ನಟಿ ತಮ್ಮ ನಾಮಧೇಯನ್ನು ವಸುಂಧರಾ ದೇವಿ ಎಂದು ಬದಲಾಯಿಸಿಕೊಂಡಿದ್ದರು. ಸೋಮವಾರ (ಅ.25) ತಿರುಮಲ ತಿರುಪತಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಐ ವೈ ಆರ್ ಕೃಷ್ಣರಾವ್ ಅವರಿಗೆ ರಿಜಿಸ್ಟರ್ ಮಾಡಿಸಿದ ಭೂಮಿಯ ದಾಖಲೆ ಪತ್ರಗಳನ್ನು ಹಸ್ತಾಂತರಿಸಿದರು.
ಈ ಭೂಮಿಯು ಚೆನ್ನೈನ ಜಿ ಎನ್ ಚೆಟ್ಟಿ ಪ್ರದೇಶದಲ್ಲಿದೆ. ಈ ಜಾಗದಲ್ಲಿ ಮದುವೆ ಚತ್ರ ಅಥವಾ ಸಮುದಾಯ ಭವನ ನಿರ್ಮಿಸುವಂತೆ ಆಕೆ ಟಿಟಿಡಿ ಅಧಿಕಾರಿಗಳಲ್ಲಿ ವಿನಂತಿಸಿಕೊಂಡಿದ್ದಾಗಿ ಮೂಲಗಳು ತಿಳಿಸಿವೆ. ಇಷ್ಟೊಂದು ಬೆಲೆ ಬಾಳುವ ಭೂಮಿಯನ್ನು ಕಾಂಚನಾ ಅವರು ದಿಢೀರ್ ಎಂದು ದಾನ ಮಾಡಲು ಕಾರಣ ಏನು ಎಂಬುದು ನಿಗೂಢವಾಗಿದೆ.
ಒಂದು ಕಾಲದಲ್ಲಿ ಕಡುಬಡತನದಲ್ಲಿದ್ದ ಈ ತಾರೆಗೆ ವಾಸಿಸಲು ಒಂದು ಮನೆಯೂ ಇರಲಿಲ್ಲ. ಮಾನಸಿಕವಾಗಿ ಅಸ್ವಸ್ಥರಾಗಿದ್ದ ಈಕೆಯನ್ನು ಕುಟುಂಬ ಸದಸ್ಯರು ಮನೆಯಿಂದ ಹೊರಹಾಕಿದ್ದರು. ಆಕೆಯ ಪೋಷಕರು ಹಾಗೂ ಒಡಹುಟ್ಟಿದವರು ಈಗಲೂ ಚೆನ್ನೈನಲ್ಲೇ ವಾಸಿಸುತ್ತಿದ್ದಾರೆ. ಅವರೆಲ್ಲರಿಂದಲೂ ಈಕೆ ದೂರವಾಗಿದ್ದಾರೆ ಸದ್ಯಕ್ಕೆ ಬೆಂಗಳೂರಿನಲ್ಲಿ ನೆಲೆನಿಂತಿದ್ದಾರೆ.