twitter
    For Quick Alerts
    ALLOW NOTIFICATIONS  
    For Daily Alerts

    ತಿಮ್ಮಪ್ಪನಿಗೆ ರು.15 ಕೋಟಿ ಭೂದಾನ ಮಾಡಿದ ನಟಿ

    By ಶಂಕರ್, ಚೆನ್ನೈ
    |

    ಸಿನಿಮಾ ತಾರೆಗಳು ತಿರುಪತಿ ತಿಮ್ಮಪ್ಪನಿಗೆ ಅಡ್ಡ ಬಿದ್ದು ಏನೋ ತಮ್ಮ ಕೈಲಾದ ಕಾಣಿಕೆ ನೀಡುವುದನ್ನು ಕೇಳಿದ್ದೇವೆ. ಆದರೆ ಈ ನಟಿ ಮಾತ್ರ ರು.15 ಕೋಟಿ ಬೆಲೆ ಬಾಳುವ ಭೂಮಿಯನ್ನು ದಾನ ಮಾಡಿದ್ದಾರೆ. ಈಕೆ ಬೇರಾರು ಅಲ್ಲ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಎಪ್ಪತ್ತರ ದಶಕದಲ್ಲಿ ಮಿಂಚಿದ್ದ ಚತುರ್ಭಾಷಾ ತಾರೆ ಕಾಂಚನಾ.

    ಈ ಹಿರಿಯ ನಟಿ ತಮ್ಮ ನಾಮಧೇಯನ್ನು ವಸುಂಧರಾ ದೇವಿ ಎಂದು ಬದಲಾಯಿಸಿಕೊಂಡಿದ್ದರು. ಸೋಮವಾರ (ಅ.25) ತಿರುಮಲ ತಿರುಪತಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಐ ವೈ ಆರ್ ಕೃಷ್ಣರಾವ್ ಅವರಿಗೆ ರಿಜಿಸ್ಟರ್ ಮಾಡಿಸಿದ ಭೂಮಿಯ ದಾಖಲೆ ಪತ್ರಗಳನ್ನು ಹಸ್ತಾಂತರಿಸಿದರು.

    ಈ ಭೂಮಿಯು ಚೆನ್ನೈನ ಜಿ ಎನ್ ಚೆಟ್ಟಿ ಪ್ರದೇಶದಲ್ಲಿದೆ. ಈ ಜಾಗದಲ್ಲಿ ಮದುವೆ ಚತ್ರ ಅಥವಾ ಸಮುದಾಯ ಭವನ ನಿರ್ಮಿಸುವಂತೆ ಆಕೆ ಟಿಟಿಡಿ ಅಧಿಕಾರಿಗಳಲ್ಲಿ ವಿನಂತಿಸಿಕೊಂಡಿದ್ದಾಗಿ ಮೂಲಗಳು ತಿಳಿಸಿವೆ. ಇಷ್ಟೊಂದು ಬೆಲೆ ಬಾಳುವ ಭೂಮಿಯನ್ನು ಕಾಂಚನಾ ಅವರು ದಿಢೀರ್ ಎಂದು ದಾನ ಮಾಡಲು ಕಾರಣ ಏನು ಎಂಬುದು ನಿಗೂಢವಾಗಿದೆ.

    ಒಂದು ಕಾಲದಲ್ಲಿ ಕಡುಬಡತನದಲ್ಲಿದ್ದ ಈ ತಾರೆಗೆ ವಾಸಿಸಲು ಒಂದು ಮನೆಯೂ ಇರಲಿಲ್ಲ. ಮಾನಸಿಕವಾಗಿ ಅಸ್ವಸ್ಥರಾಗಿದ್ದ ಈಕೆಯನ್ನು ಕುಟುಂಬ ಸದಸ್ಯರು ಮನೆಯಿಂದ ಹೊರಹಾಕಿದ್ದರು. ಆಕೆಯ ಪೋಷಕರು ಹಾಗೂ ಒಡಹುಟ್ಟಿದವರು ಈಗಲೂ ಚೆನ್ನೈನಲ್ಲೇ ವಾಸಿಸುತ್ತಿದ್ದಾರೆ. ಅವರೆಲ್ಲರಿಂದಲೂ ಈಕೆ ದೂರವಾಗಿದ್ದಾರೆ ಸದ್ಯಕ್ಕೆ ಬೆಂಗಳೂರಿನಲ್ಲಿ ನೆಲೆನಿಂತಿದ್ದಾರೆ.

    Wednesday, October 27, 2010, 17:53
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X