Just In
Don't Miss!
- News
ಸಂಸತ್ ಕಟ್ಟಡದ ಮಹಾತ್ಮ ಗಾಂಧಿ ಪ್ರತಿಮೆ ತರಾತುರಿಯಲ್ಲಿ ಸ್ಥಳಾಂತರ
- Sports
ಐಎಸ್ಎಲ್: ಬೆಂಗಳೂರಿಗೆ ಸೋಲಿನ ಆಘಾತ ನೀಡಿದ ಕೇರಳ ಬ್ಲಾಸ್ಟರ್ಸ್
- Education
WAPCOS Recruitment 2021: 11 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಇಪ್ಪತ್ತು ದಿನದಲ್ಲಿ 47 ಪರ್ಸೆಂಟ್ ನಷ್ಟು ಏರಿಕೆ ಕಂಡ ಟಾಟಾ ಮೋಟಾರ್ಸ್ ಷೇರು
- Automobiles
ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಸಿ5 ಏರ್ಕ್ರಾಸ್ ಕಾರು
- Lifestyle
ಯಾವಾಗ ಸಂಗಾತಿಗೆ ಮೋಸ ಮಾಡಿ ಅನೈತಿಕ ಸಂಬಂಧ ಬೆಳೆಸುತ್ತಾರೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ತಿಮ್ಮಪ್ಪನಿಗೆ ರು.15 ಕೋಟಿ ಭೂದಾನ ಮಾಡಿದ ನಟಿ
ಸಿನಿಮಾ ತಾರೆಗಳು ತಿರುಪತಿ ತಿಮ್ಮಪ್ಪನಿಗೆ ಅಡ್ಡ ಬಿದ್ದು ಏನೋ ತಮ್ಮ ಕೈಲಾದ ಕಾಣಿಕೆ ನೀಡುವುದನ್ನು ಕೇಳಿದ್ದೇವೆ. ಆದರೆ ಈ ನಟಿ ಮಾತ್ರ ರು.15 ಕೋಟಿ ಬೆಲೆ ಬಾಳುವ ಭೂಮಿಯನ್ನು ದಾನ ಮಾಡಿದ್ದಾರೆ. ಈಕೆ ಬೇರಾರು ಅಲ್ಲ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಎಪ್ಪತ್ತರ ದಶಕದಲ್ಲಿ ಮಿಂಚಿದ್ದ ಚತುರ್ಭಾಷಾ ತಾರೆ ಕಾಂಚನಾ.
ಈ ಹಿರಿಯ ನಟಿ ತಮ್ಮ ನಾಮಧೇಯನ್ನು ವಸುಂಧರಾ ದೇವಿ ಎಂದು ಬದಲಾಯಿಸಿಕೊಂಡಿದ್ದರು. ಸೋಮವಾರ (ಅ.25) ತಿರುಮಲ ತಿರುಪತಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಐ ವೈ ಆರ್ ಕೃಷ್ಣರಾವ್ ಅವರಿಗೆ ರಿಜಿಸ್ಟರ್ ಮಾಡಿಸಿದ ಭೂಮಿಯ ದಾಖಲೆ ಪತ್ರಗಳನ್ನು ಹಸ್ತಾಂತರಿಸಿದರು.
ಈ ಭೂಮಿಯು ಚೆನ್ನೈನ ಜಿ ಎನ್ ಚೆಟ್ಟಿ ಪ್ರದೇಶದಲ್ಲಿದೆ. ಈ ಜಾಗದಲ್ಲಿ ಮದುವೆ ಚತ್ರ ಅಥವಾ ಸಮುದಾಯ ಭವನ ನಿರ್ಮಿಸುವಂತೆ ಆಕೆ ಟಿಟಿಡಿ ಅಧಿಕಾರಿಗಳಲ್ಲಿ ವಿನಂತಿಸಿಕೊಂಡಿದ್ದಾಗಿ ಮೂಲಗಳು ತಿಳಿಸಿವೆ. ಇಷ್ಟೊಂದು ಬೆಲೆ ಬಾಳುವ ಭೂಮಿಯನ್ನು ಕಾಂಚನಾ ಅವರು ದಿಢೀರ್ ಎಂದು ದಾನ ಮಾಡಲು ಕಾರಣ ಏನು ಎಂಬುದು ನಿಗೂಢವಾಗಿದೆ.
ಒಂದು ಕಾಲದಲ್ಲಿ ಕಡುಬಡತನದಲ್ಲಿದ್ದ ಈ ತಾರೆಗೆ ವಾಸಿಸಲು ಒಂದು ಮನೆಯೂ ಇರಲಿಲ್ಲ. ಮಾನಸಿಕವಾಗಿ ಅಸ್ವಸ್ಥರಾಗಿದ್ದ ಈಕೆಯನ್ನು ಕುಟುಂಬ ಸದಸ್ಯರು ಮನೆಯಿಂದ ಹೊರಹಾಕಿದ್ದರು. ಆಕೆಯ ಪೋಷಕರು ಹಾಗೂ ಒಡಹುಟ್ಟಿದವರು ಈಗಲೂ ಚೆನ್ನೈನಲ್ಲೇ ವಾಸಿಸುತ್ತಿದ್ದಾರೆ. ಅವರೆಲ್ಲರಿಂದಲೂ ಈಕೆ ದೂರವಾಗಿದ್ದಾರೆ ಸದ್ಯಕ್ಕೆ ಬೆಂಗಳೂರಿನಲ್ಲಿ ನೆಲೆನಿಂತಿದ್ದಾರೆ.