Don't Miss!
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- News Bird Flu: ಮೊಟ್ಟೆ-ಕೋಳಿ ತಿನ್ನುವವರೇ ಹುಷಾರ್!- ಹೆಚ್ಚಾಗಿದೆ ಹಕ್ಕಿಜ್ವರ
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಿಮ್ಮಪ್ಪನಿಗೆ ರು.15 ಕೋಟಿ ಭೂದಾನ ಮಾಡಿದ ನಟಿ
ಸಿನಿಮಾ ತಾರೆಗಳು ತಿರುಪತಿ ತಿಮ್ಮಪ್ಪನಿಗೆ ಅಡ್ಡ ಬಿದ್ದು ಏನೋ ತಮ್ಮ ಕೈಲಾದ ಕಾಣಿಕೆ ನೀಡುವುದನ್ನು ಕೇಳಿದ್ದೇವೆ. ಆದರೆ ಈ ನಟಿ ಮಾತ್ರ ರು.15 ಕೋಟಿ ಬೆಲೆ ಬಾಳುವ ಭೂಮಿಯನ್ನು ದಾನ ಮಾಡಿದ್ದಾರೆ. ಈಕೆ ಬೇರಾರು ಅಲ್ಲ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಎಪ್ಪತ್ತರ ದಶಕದಲ್ಲಿ ಮಿಂಚಿದ್ದ ಚತುರ್ಭಾಷಾ ತಾರೆ ಕಾಂಚನಾ.
ಈ ಹಿರಿಯ ನಟಿ ತಮ್ಮ ನಾಮಧೇಯನ್ನು ವಸುಂಧರಾ ದೇವಿ ಎಂದು ಬದಲಾಯಿಸಿಕೊಂಡಿದ್ದರು. ಸೋಮವಾರ (ಅ.25) ತಿರುಮಲ ತಿರುಪತಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಐ ವೈ ಆರ್ ಕೃಷ್ಣರಾವ್ ಅವರಿಗೆ ರಿಜಿಸ್ಟರ್ ಮಾಡಿಸಿದ ಭೂಮಿಯ ದಾಖಲೆ ಪತ್ರಗಳನ್ನು ಹಸ್ತಾಂತರಿಸಿದರು.
ಈ ಭೂಮಿಯು ಚೆನ್ನೈನ ಜಿ ಎನ್ ಚೆಟ್ಟಿ ಪ್ರದೇಶದಲ್ಲಿದೆ. ಈ ಜಾಗದಲ್ಲಿ ಮದುವೆ ಚತ್ರ ಅಥವಾ ಸಮುದಾಯ ಭವನ ನಿರ್ಮಿಸುವಂತೆ ಆಕೆ ಟಿಟಿಡಿ ಅಧಿಕಾರಿಗಳಲ್ಲಿ ವಿನಂತಿಸಿಕೊಂಡಿದ್ದಾಗಿ ಮೂಲಗಳು ತಿಳಿಸಿವೆ. ಇಷ್ಟೊಂದು ಬೆಲೆ ಬಾಳುವ ಭೂಮಿಯನ್ನು ಕಾಂಚನಾ ಅವರು ದಿಢೀರ್ ಎಂದು ದಾನ ಮಾಡಲು ಕಾರಣ ಏನು ಎಂಬುದು ನಿಗೂಢವಾಗಿದೆ.
ಒಂದು ಕಾಲದಲ್ಲಿ ಕಡುಬಡತನದಲ್ಲಿದ್ದ ಈ ತಾರೆಗೆ ವಾಸಿಸಲು ಒಂದು ಮನೆಯೂ ಇರಲಿಲ್ಲ. ಮಾನಸಿಕವಾಗಿ ಅಸ್ವಸ್ಥರಾಗಿದ್ದ ಈಕೆಯನ್ನು ಕುಟುಂಬ ಸದಸ್ಯರು ಮನೆಯಿಂದ ಹೊರಹಾಕಿದ್ದರು. ಆಕೆಯ ಪೋಷಕರು ಹಾಗೂ ಒಡಹುಟ್ಟಿದವರು ಈಗಲೂ ಚೆನ್ನೈನಲ್ಲೇ ವಾಸಿಸುತ್ತಿದ್ದಾರೆ. ಅವರೆಲ್ಲರಿಂದಲೂ ಈಕೆ ದೂರವಾಗಿದ್ದಾರೆ ಸದ್ಯಕ್ಕೆ ಬೆಂಗಳೂರಿನಲ್ಲಿ ನೆಲೆನಿಂತಿದ್ದಾರೆ.