ಬೆಳಗಾವಿಯಲ್ಲಿ ಬಿಂದಾಸ್ ಬೆಡಗಿ ನಿಖಿತಾ ತುಕ್ರಲ್
ಕನ್ನಡ ಚಲನಚಿತ್ರೋದ್ಯಮದ ಭಾರಿ ಬಜೆಟ್ ಚಿತ್ರ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ'. ಈ ಚಿತ್ರದ ಚಿತ್ರೀಕರಣ ಶರವೇಗದಲ್ಲಿ ಸಾಗುತ್ತಿದೆ. ಬೆಳಗಾವಿ, ಗೋಕಾಕ್, ಮಂದಗಡ, ಗೋಗಿಹಳ್ಳ, ಗೊಡಚಿನ ಮಲ್ಕಿ, ಎಲ್ಲೂರು ಗಡ, ಕುರಿವಿನ ಕೊಪ್ಪ, ಹಣಸಿಕಟ್ಟಿ, ಬಾದಾಮಿ, ಪಟ್ಟದಕಲ್ಲು ಪ್ರದೇಶಗಳಲ್ಲಿ ಚಿತ್ರದ ಶೂಟಿಂಗ್ ಭರದಿಂದ ಸಾಗಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ನಿಖಿತಾ ತುಕ್ರಲ್ ಜೊತೆಯಾಗಿ ಅಭಿನಯಿಸುತ್ತಿರುವ ಚಿತ್ರ ಇದಾಗಿದೆ. ಬಹುಭಾಷಾ ತಾರೆ ಜಯಪ್ರದಾ ಈ ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ಪೋಷಿಸುತ್ತಿರುವುದು ಗೊತ್ತೇ ಇದೆ. ಇದೊಂದು ಐತಿಹಾಸಿಕ ಚಿತ್ರವಾಗಿದ್ದು ಬರೋಬ್ಬರಿ ರು.12 ಕೋಟಿ ಬಜೆಟ್ನಲ್ಲಿ ನಿರ್ಮಿಸುತ್ತಿದ್ದಾರೆ ಆನಂದ್ ಅಪ್ಪುಗೋಳ್.
ಶಶಿಕುಮಾರ್, ಶ್ರೀನಿವಾಸಮೂರ್ತಿ, ಶೋಭಾರಾಜ್, ಉಮಾಶ್ರೀ, ದೊಡ್ಡಣ್ಣ, ಸಿಆರ್ ಸಿಂಹ, ರಮೇಶ್ ಭಟ್, ಶಿವಕುಮಾರ್, ಧರ್ಮಾ, ಸತ್ಯಜಿತ್, ಕರಿಬಸವಯ್ಯ, ಕಿಲ್ಲರ್ ವೆಂಕಟೇಶ್ ಇನ್ನಿತರರು ಚಿತ್ರದ ತಾರಾಗಣದಲ್ಲಿದ್ದಾರೆ. ಆನಂದ್ ಬಿ ಅಪ್ಪುಗೋಲ್ ನಿರ್ಮಿಸುತ್ತಿರುವ ಚಿತ್ರಕ್ಕೆ ನಾಗಣ್ಣ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಶೀಘ್ರದಲ್ಲೆ ಈ ಚಿತ್ರ ಪ್ರೇಕ್ಷಕರ ಮುಂದೆ ಬರಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ. (ಏಜೆನ್ಸೀಸ್)


Click it and Unblock the Notifications











