Don't Miss!
- News ದೇವೇಗೌಡರು ಕಣ್ಣೀರು ಹಾಕುವಂತೆ ಯಾರು ಏನು ಮಾಡಿದ್ದಾರೆ? ಡಿ ಕೆ ಶಿವಕುಮಾರ್ ಹೇಳಿದ್ದೇನು?
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Automobiles ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬ್ಲಾಕ್ ಬಸ್ಟರ್ ಚಿತ್ರವಾಗಿ ಪುನೀತ್ ಹುಡುಗರು
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮುಖ್ಯಭೂಮಿಕೆಯಲ್ಲಿರುವ ಬಹುತಾರಾಗಣದ ಚಿತ್ರ 'ಹುಡುಗರು' ಬ್ಲಾಕ್ ಬಸ್ಟರ್ ಚಿತ್ರವಾಗಿ ಹೊರಹೊಮ್ಮಿದೆ. ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿರುವ ಹುಡುಗರು 40 ಕೇಂದ್ರಗಳಲ್ಲಿ ಅರ್ಧ ಶತಕ ಬಾರಿಸಿದೆ.
ಹುಡುಗರು ಹೀಗೆ ಮುಂದುವರೆದರೆ ಶತಕ ಬಾರಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಚಿತ್ರಕ್ಕೆ ವಿದೇಶದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ತಮಿಳಿನ ಯಶಸ್ವಿ ಚಿತ್ರ 'ನಾಡೋಡಿಗಳ್' ರೀಮೇಕ್ ಚಿತ್ರ ಇದಾಗಿತ್ತು. ಕನ್ನಡದಜಾಯಮಾನಕ್ಕೆ ತಕ್ಕಂತೆ ಈ ಚಿತ್ರವನ್ನು ತೆರೆಗೆ ತಂದಿದ್ದರು ನಿರ್ದೇಶಕ ಮಾದೇಶ.
ಇಬ್ಬರು ಪ್ರೇಮಿಗಳನ್ನು ಒಂದು ಮಾಡಲು ಹೋಗಿ ನಾನಾ ಕಷ್ಟಗಳನ್ನು ಮೈಮೇಲೆ ಎಳೆದುಕೊಳ್ಳುವ ಕಥಾಹಂದರದ ಚಿತ್ರವಿದು. ಶ್ರೀನಗರ ಕಿಟ್ಟಿ, ಲೂಸ್ ಮಾದ ಯೇಗೇಶ್ ಹಾಗೂ ರಾಧಿಕಾ ಪಂಡಿತ್ ಅಭಿಯನ ಮೆಚ್ಚುಗೆಗೆ ಪಾತ್ರವಾಗಿತ್ತು. ಎಲ್ಲಕ್ಕಿಂತಲೂ ಮುಖ್ಯವಾಗಿ ವಿ ಹರಿಕೃಷ್ಣ ಸಂಗೀತ ಗಮನಸೆಳೆದ ಸಂಗತಿ. ತಮ್ಮ ಚಿತ್ರ ಒಂದು ಹಂತಕ್ಕೆ ಯಶಸ್ವಿಯಾಗಲು ಕಾರಣರಾದ ಪ್ರತಿಯೊಬ್ಬರಿಗೂ ರಾಘವೇಂದ್ರ ರಾಜ್ ಕುಮಾರ್ ಥ್ಯಾಂಕ್ಸ್ ಹೇಳಿದ್ದಾರೆ. (ದಟ್ಸ್ಕನ್ನಡ ಸಿನಿವಾರ್ತೆ)