Don't Miss!
- Lifestyle ದೇಹದಲ್ಲಿ ಈ 7 ಭಾಗದಲ್ಲಿ ಊತ ಉಂಟಾದರೆ ಅದು ಫ್ಯಾಟಿ ಲಿವರ್ನ ಲಕ್ಷಣವಾಗಿದೆ, ನಿರ್ಲಕ್ಷ್ಯ ಮಾಡಬೇಡಿ
- Finance ನೀರಿನ ಬಿಕ್ಕಟ್ಟು: ಬೆಂಗಳೂರು ತೊರೆಯಲು ಮುಂದಾದ ಅನೇಕ ನಿವಾಸಿಗಳು!
- Technology ಇಂದು ಒನ್ಪ್ಲಸ್ನ ಈ ಸ್ಪೆಷಲ್ ಮೊಬೈಲ್ನ ಫಸ್ಟ್ ಸೇಲ್!..ಬೆಲೆ ಎಷ್ಟು ಅಂತೀರಾ?
- News ಚಾಮರಾಜನಗರ: 12 ವರ್ಷಗೊಳಿಗೊಮ್ಮೆ ನಡೆಯುವ ಈ ಜಾತ್ರೆಯಲ್ಲಿ ಎಲ್ಲರನ್ನೂ ಬಯ್ಯೋದೇ ವಿಶೇಷ.!-ಬೈಗಳು ಹೇಗಿರುತ್ತವೆ ಗೊತ್ತಾ?
- Automobiles ಭಾರತದ ರಸ್ತೆಯಲ್ಲಿ ಘರ್ಜಿಸಲು ಬಂದ ಪವರ್ಫುಲ್ ಎಪ್ರಿಲಿಯಾ ಬೈಕ್ ವಿತರಣೆ ಮಾಹಿತಿ ಬಹಿರಂಗ
- Sports ಆರ್ಸಿಬಿ ಸ್ಟಾರ್ ಶ್ರೇಯಾಂಕಾ ಪಾಟೀಲ್ ಬಗ್ಗೆ ನಿಮಗೆಷ್ಟು ಗೊತ್ತು?; ಶಿಕ್ಷಣ, ವಯಸ್ಸು, ಕೌಟುಂಬಿಕ ಹಿನ್ನೆಲೆ ಬಗ್ಗೆ ಮಾಹಿತಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರಲೋಕದೊಳಗೆ ಹೊಸ ನಾಯಕ ಅಲೋಕ
ಚಿತ್ರರಂಗದಲ್ಲಿ ವಂಶ ಕುಡಿಗಳು ಆಗಮನ ಹೊಸದೇನಲ್ಲ. ಇದೀಗ ಆ ಲಿಸ್ಟ್ ಗೆ ಮತ್ತೊಬ್ಬ ನಾಯಕ ನಟನ ಸೇರ್ಪಡೆಯಾಗಿದೆ. ಅನುಭವ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯನ್ನೇ ಎಬ್ಬಿಸಿದ್ದ ಪ್ರತಿಭಾವಂತ ನಿರ್ದೇಶಕ ಕಾಶೀನಾಥ್ ಅವರ ಪುತ್ರ ಅಲೋಕ್ ಸದ್ದಿಲ್ಲದೇ ರಂಗ ಪ್ರವೇಶ ಮಾಡಿದ್ದಾನೆ. ಅಲೋಕ ನಾಯಕ ನಟನಾಗಿ ಅಭಿನಯಿಸಿರುವ ಬಾಜಿ ಚಿತ್ರ ಬಿಡುಗಡೆಗೆ ಕಾದು ಕುಳಿತಿದೆ.
ಕಾಶೀನಾಥ್ ಪ್ರತಿಭಾವಂತ ನಿರ್ದೇಶಕ ಎನ್ನುವುದರಲ್ಲಿ ಎರಡು ಮಾತಿಲ್ಲ. ಅವರ ಗರಡಿಯಲ್ಲಿ ಬೆಳದಿರುವ ಉಪೇಂದ್ರ,ವಿ.ಮನೋಹರ್, ಸಾಧುಕೋಕಿಲ, ಸುನೀಲ್ ಕುಮಾರ್ ದೇಸಾಯಿ ಸೇರಿದಂತೆ ಅನೇಕ ನಾಯಕ ನಟರು, ತಾಂತ್ರಿಕ ಸಿಬ್ಬಂದಿಗಳು ಇಂದು ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಹೊಸತನಕ್ಕೆ ಇನ್ನೊಂದು ಹೆಸರೆಂದರೆ ಕಾಶೀನಾಥ್ ಎಂದರೆ ಉತ್ಪ್ರೇಕ್ಷೆಯಲ್ಲ. ಆದರೆ ಅಪವಾದವೆಂದರೆ ಕಾಶೀನಾಥ್ ಅವರ ಹಸಿಬಿಸಿ ಚಿತ್ರಗಳನ್ನು ನಿರ್ಮಿಸುತ್ತಾರೆ ಎನ್ನುವ ಆರೋಪ ಕೂಡಾ ಅವರ ಮೇಲಿತ್ತು. ಅಂತಹ ತಜ್ಞರ ಪುತ್ರ ಅಲೋಕ ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆಗಾಗಿ ಆಖಾಡಕ್ಕಿಳಿದಿದ್ದಾರೆ. ನೀಳಕಾಯದ ಸುಂದರನನ್ನು ಕನ್ನಡ ಚಿತ್ರರಂಗ ಬೆಳಸುತ್ತಾ ಎನ್ನುವುದನ್ನು ಕಾಲ ನಿರ್ಧರಿಸಲಿದೆ.
ಇತ್ತೀಚಿನ ದಿನಗಲ್ಲಿ ಕನ್ನಡ ಚಿತ್ರರಂಗ ಅನೇಕ ಯುವ ನಟ-ನಟಿ, ತಾಂತ್ರಿಕ ವರ್ಗಗಳ ಸಮೂಹವನ್ನೇ ಕಂಡಿದೆ. ಅನೇಕರು ಯಶಸ್ವಿಯಾಗಿದ್ದಾರೆ. ಹಲವರು ಹೇಳಹೆಸರಿಲ್ಲದೇ ನಾಪತ್ತೆಯಾಗಿದ್ದಾರೆ. ಅದೃಷ್ಟ ಇಲ್ಲಿ ಮುಖ್ಯವಾಗಿದ್ದು, ಕಾಶೀನಾಥ್ ಪುತ್ರ ತಂದೆಯ ನೆರಳಿನಿಂದ ಆಚೆ ಬಂದು ಉತ್ತಮ ನಟ ಎಂದು ನಿರೂಪಿಸಬೇಕಾಗಿದೆ.ಹೆಚ್ಚು ಹೆಚ್ಚು ಅವಕಾಶಗಳು ದೊರೆಯಲಿ, ಅಲೋಕ ಉತ್ತಮ ನಟನಾಗಿ ಬೆಳಯಲಿ ಎನ್ನುವುದು ಕನ್ನಡಿಗರ ಹಾರೈಕೆಯಾಗಿದೆ.
(ದಟ್ಸ್ ಕನ್ನಡಸಿನಿ ವಾರ್ತೆ)