Don't Miss!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- News ಡಿಕೆ ಸುರೇಶ್ ನಿದ್ದೆಗೆಡಿಸಿದ ಡಾಕ್ಟರ್; ಕಾಂಗ್ರೆಸ್ ಅಭ್ಯರ್ಥಿ ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ: ಭವಿಷ್ಯ ನುಡಿದ ಸಿದ್ದರಾಮ
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೂರು ದಶಕಗಳ ಬಳಿಕ ಕನ್ನಡಕ್ಕೆ ಮರಳಿದ ರಜನಿ
ನಟ ರಜನಿಕಾಂತ್ ಸುದೀರ್ಘ ಮೂರು ದಶಕಗಳ ಬಳಿಕ ಪುನಃ ಕನ್ನಡ ಚಿತ್ರರಂಗಕ್ಕೆ ಮರಳಿದ್ದಾರೆ. ಅದೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜೊತೆ ನಟಿಸಲು. ಶಿವರಾಜ್ ಕುಮಾರ್ ಅಭಿನಯದ ನೂರನೇ ಚಿತ್ರ 'ಜೋಗಯ್ಯ' ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ರಜನಿಕಾಂತ್ ಕಾಣಿಸಲಿದ್ದಾರೆ.
ರಜನಿಕಾಂತ್ ತಮಿಳು ಚಿತ್ರಗಳಲ್ಲಿ ತೊಡಗಿಕೊಂಡಿದ್ದರೂ ವರನಟ ಡಾ.ರಾಜ್ ಕುಮಾರ್ ಅವರ ಕುಟುಂಬದೊಂದಿಗೆ ಒಡನಾಡವಿದ್ದೇ ಇತ್ತು. ಹಾಗಾಗಿ ಈ ಚಿತ್ರದಲ್ಲಿ ನಟಿಸಲು ಒಪ್ಪಿದ್ದಾರೆ ಎನ್ನಲಾಗಿದೆ. ರಜನಿ ಅವರನ್ನು 'ಜೋಗಯ್ಯ' ಚಿತ್ರದ ನಿರ್ದೇಶಕ ಪ್ರೇಮ್ ಭೇಟಿ ಮಾಡಿ ತಮ್ಮ ಚಿತ್ರದಲ್ಲಿ ನಟಿಸುವಂತೆ ಕೇಳಿದ್ದರು. ಅವರ ಮಾತಿಗೆ ರಜನಿ ಕೂಡಲೆ ಓಕೆ ಎಂದಿದ್ದಾರೆ.
ದಟ್ಸ್ ಕನ್ನಡಕ್ಕೆ ದೊರತ ಮಾಹಿತಿ ಪ್ರಕಾರ, ಜೋಗಯ್ಯ ಚಿತ್ರದಲ್ಲಿ ಕೇವಲ ಐದೇ ಐದು ನಿಮಿಷ ಕಾಲಾವಧಿಯ ಪಾತ್ರದಲ್ಲಿ ರಜನಿ ಕಾಣಿಸಲಿದ್ದಾರೆ. ಪಾತ್ರ ಚಿಕ್ಕದಾದರೂ ಪವರ್ ಫುಲ್ ಆಗಿರುತ್ತದೆಯಂತೆ. 'ಜೋಗಿ' ನೋಡಿದ್ದ ರಜನಿಕಾಂತ್ ಆಗಲೇ ಪ್ರೇಮ್ ಮುಂದಿನ ಚಿತ್ರದಲ್ಲಿ ನಟಿಸಲು ಆಸಕ್ತಿ ತೋರಿದ್ದರು. ಜೋಗಯ್ಯ ಮೂಲಕ ರಜನಿ ಆಸೆ ನೆರವೇರುತ್ತಿದೆ.
ಕನ್ನಡ ಚಿತ್ರಗಳು : ಆರಿಸಿನೋಡು ಬೀಳಿಸಿನೋಡು
ಕನ್ನಡದಲ್ಲಿ ರಜನಿಕಾಂತ್ 15ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ತಮಿಳು ಚಿತ್ರರಂಗದಲ್ಲಿ ಸೂಪರ್ ಸ್ಟಾರ್ ಎನ್ನಿಸಿದ ಬಳಿಕ ಅವರು ಕನ್ನಡ ಚಿತ್ರರಂಗಕ್ಕೆ ದೂರವಾದರು. ಕನ್ನಡದ ಸಹೋದರರ ಸವಾಲ್, ಕಥಾ ಸಂಗಮ, ಗಲಾಟೆ ಸಂಸಾರ, ಬಾಳು ಜೇನು, ಒಂದು ಪ್ರೇಮದ ಕತೆ, ಕಿಲಾಡಿ ಕಿಟ್ಟು, ಮಾತು ತಪ್ಪದ ಮಗ ಸೇರಿದಂತೆ 15ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಸಿ ವಿ ರಾಜೇಂದ್ರ ಅವರ ಬಹುಭಾಷಾ ಚಿತ್ರ 'ಗರ್ಜನೆ' ಅವರ ಅಭಿನಯದ ಕೊನೆಯ ಕನ್ನಡ ಚಿತ್ರ. [ಜೋಗಯ್ಯ]