Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೈಎಸ್ಆರ್ ನಿಗೂಢ ಸಾವಿನ ಮೇಲೆ ವರ್ಮಾ ಸಿನಿಮಾ
ಆಂಧ್ರ ಪ್ರದೇಶನದ ಮಾಜಿ ಮುಖ್ಯಮಂತ್ರಿ ವೈ ಎಸ್ ರಾಜಶೇಖರ ರೆಡ್ಡಿ ಹೆಲಿಕಾಪ್ಟರ್ ದುರಂತದಲ್ಲಿ ಸಾವಪ್ಪಿದ್ದು ಗೊತ್ತೇ ಇದೆ. ಆದರೆ ಇದು ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಎಂಬುದು ಇನ್ನೂ ನಿಗೂಢವಾಗಿಯೇ ಉಳಿದಿದೆ. ಅವರ ಸಾವು ಉದ್ದೇಶಪೂರ್ವಕವಾಗಿದ್ದರೆ, ಅದರ ಹಿಂದಿನ ಕೈಗಳಾವುವು??
ಈ ಪ್ರಶ್ನೆಗೆ ಉತ್ತರ ನೀಡಲು ಹೊರಟಿದ್ದಾರೆ ಬಾಲಿವುಡ್ನ 'ಭಯಾನಕ' ನಿರ್ದೇಶಕ ರಾಮ್ ಗೋಪಾಲ್ ವರ್ಮ. ತೆಲುಗಿನಲ್ಲಿ ನಿರ್ಮಾಣವಾಗಲಿರುವ ಈ ಚಿತ್ರದ ಶೀರ್ಷಿಕೆ ಕುತೂಹಲ ಹುಟ್ಟಿಸುವಂತಿದೆ. ಅದೇನೆಂದರೆ 'ರೆಡ್ಡಿಗಾರು ಪೋಯಾರು' (ರೆಡ್ಡಿಯವರು ಹೋದರು). ಅಂದರೆ ಯಾವ ರೆಡ್ಡಿ ಎಂಬ ಅನುಮಾನ ಮೂಡುತ್ತದೆ.
ವೈಎಸ್ ರಾಜಶೇಖರ ರೆಡ್ಡಿಯೇ ಅಥವಾ ಜನಾರ್ಧನ ರೆಡ್ಡಿ ಜೈಲಿಗೆ ಹೋಗಿದ್ದೇ. ಸದ್ಯಕ್ಕೆ ಈ ಚಿತ್ರದ ಬಗ್ಗೆ ಯಾವುದೇ ಸುಳಿವು ಲಭ್ಯವಿಲ್ಲ. ಕೇವಲ ಚಿತ್ರದ ಶೀರ್ಷಿಕೆಯಷ್ಟೇ ಪಕ್ಕಾ ಆಗಿದೆ. ಸದ್ಯಕ್ಕೆ ಬಿಡುಗಡೆಯಾಗಿರುವ ಪೋಸ್ಟರ್ನಲ್ಲಿ ಹೀಗಿದೆ, "In War, you can only be killed once, but in politics, many times-Winston Churchill. (ಏಜೆನ್ಸೀಸ್)