Don't Miss!
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- News ಬೆಂಗಳೂರಿನಲ್ಲಿ ಮೋದಿ ಮತಬೇಟೆ; ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಡಾ.ಜಿ ಪರಮೇಶ್ವರ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೈಎಸ್ಆರ್ ನಿಗೂಢ ಸಾವಿನ ಮೇಲೆ ವರ್ಮಾ ಸಿನಿಮಾ
ಆಂಧ್ರ ಪ್ರದೇಶನದ ಮಾಜಿ ಮುಖ್ಯಮಂತ್ರಿ ವೈ ಎಸ್ ರಾಜಶೇಖರ ರೆಡ್ಡಿ ಹೆಲಿಕಾಪ್ಟರ್ ದುರಂತದಲ್ಲಿ ಸಾವಪ್ಪಿದ್ದು ಗೊತ್ತೇ ಇದೆ. ಆದರೆ ಇದು ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಎಂಬುದು ಇನ್ನೂ ನಿಗೂಢವಾಗಿಯೇ ಉಳಿದಿದೆ. ಅವರ ಸಾವು ಉದ್ದೇಶಪೂರ್ವಕವಾಗಿದ್ದರೆ, ಅದರ ಹಿಂದಿನ ಕೈಗಳಾವುವು??
ಈ ಪ್ರಶ್ನೆಗೆ ಉತ್ತರ ನೀಡಲು ಹೊರಟಿದ್ದಾರೆ ಬಾಲಿವುಡ್ನ 'ಭಯಾನಕ' ನಿರ್ದೇಶಕ ರಾಮ್ ಗೋಪಾಲ್ ವರ್ಮ. ತೆಲುಗಿನಲ್ಲಿ ನಿರ್ಮಾಣವಾಗಲಿರುವ ಈ ಚಿತ್ರದ ಶೀರ್ಷಿಕೆ ಕುತೂಹಲ ಹುಟ್ಟಿಸುವಂತಿದೆ. ಅದೇನೆಂದರೆ 'ರೆಡ್ಡಿಗಾರು ಪೋಯಾರು' (ರೆಡ್ಡಿಯವರು ಹೋದರು). ಅಂದರೆ ಯಾವ ರೆಡ್ಡಿ ಎಂಬ ಅನುಮಾನ ಮೂಡುತ್ತದೆ.
ವೈಎಸ್ ರಾಜಶೇಖರ ರೆಡ್ಡಿಯೇ ಅಥವಾ ಜನಾರ್ಧನ ರೆಡ್ಡಿ ಜೈಲಿಗೆ ಹೋಗಿದ್ದೇ. ಸದ್ಯಕ್ಕೆ ಈ ಚಿತ್ರದ ಬಗ್ಗೆ ಯಾವುದೇ ಸುಳಿವು ಲಭ್ಯವಿಲ್ಲ. ಕೇವಲ ಚಿತ್ರದ ಶೀರ್ಷಿಕೆಯಷ್ಟೇ ಪಕ್ಕಾ ಆಗಿದೆ. ಸದ್ಯಕ್ಕೆ ಬಿಡುಗಡೆಯಾಗಿರುವ ಪೋಸ್ಟರ್ನಲ್ಲಿ ಹೀಗಿದೆ, "In War, you can only be killed once, but in politics, many times-Winston Churchill. (ಏಜೆನ್ಸೀಸ್)