Don't Miss!
- Finance Bengaluru Suburban Rail Project: ದೊಡ್ಡಜಾಲದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರೈಲು ಸಂಪರ್ಕ, ವಿವರ
- Automobiles Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
- News ನಂಬರ್ ಪ್ಲೇಟ್ ವಿಚಾರದಲ್ಲಿ ವಾಹನ ಮಾಲೀಕರೇ ಈ ತಪ್ಪು ಮಾಡಬೇಡಿ!
- Technology Jio: ಅಗ್ಗದ ಜಿಯೋ ಸಿನಿಮಾ ಪ್ರೀಮಿಯಂ ಚಂದಾದಾರಿಕೆ ಘೋಷಣೆ! 29 ರೂ.ಗಳಿಂದ ಪ್ರಾರಂಭ..
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಹಾ ಬುದ್ಧಿವಂತನಾದ ಸಿಲ್ಲಿ ಲಲ್ಲಿ ರವಿಶಂಕರ
ಸಿಲ್ಲಿ ಲಲ್ಲಿ ಸೀರಿಯಲ್ ನಲ್ಲಿ ವೇರಿ ಫೇಮಸ್ ಇನ್ ಸರ್ಜರಿ ಅಂಡ್ ಭರ್ಜರಿ ಎನ್ನುತ್ತಾ ಎಲ್ಲರ ಹೃದಯ ಗೆದ್ದಿದ್ದ ರವಿಶಂಕರ್ ಅವರ ಸಿನಿ ಪಯಣ ಯಾಕೋ ಕುಂಟುತ್ತಾ ಸಾಗಿದೆ. ಸ್ವತಃ ಉತ್ತಮ ಗಾಯಕರಾದರೂ ಹಾಸ್ಯ ಪ್ರಧಾನ ಪಾತ್ರಕ್ಕೆ ಅಂಟಿಕೊಂಡ ರವಿಶಂಕರ್ ಗೆ ಪಯಣ ಉತ್ತಮ ಬ್ರೇಕ್ ನೀಡುತ್ತದೆ ಎಂದು ಎಲ್ಲರೂ ಭಾವಿಸಿದ್ದರು. ಉತ್ತಮ ಹಾಡು, ಅಭಿನಯ ಎಲ್ಲಾ ಇದ್ದರೂ ಜನಮೆಚ್ಚುಗೆ ಗಳಿಸಿತೇ ಹೊರತೂ ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡಲಿಲ್ಲ.
ಮುಂದೆ ದಿಂಡಿಗಲ್ ಸಾರಥಿ ಎಂಬ ತಮಿಳು ಚಿತ್ರದ ಕನ್ನಡ ರಿಮೇಕ್ ನಂಜನಗೂಡು ನಂಜುಂಡ ನಾಗಿ ಕಾಣಿಸಿಕೊಂಡಿದ್ದು ಪ್ರಯೋಜನಕ್ಕೆ ಬರಲಿಲ್ಲ. ಆದರೆ, ಇದರಿಂದ ಧೃತಿಗೆಡದ ರವಿಶಂಕರ್ ಈಗ ಮಹಾಬುದ್ಧಿವಂತನಾಗಲು ಹೊರಟಿದ್ದಾರೆ. ಆದರೆ, ಈ ಚಿತ್ರ ಕೂಡಾ ರಿಮೇಕ್ ಚಿತ್ರನಾ ಅಥವಾ ಸ್ವಮೇಕಾ ಎಂದು ನಿರ್ಮಾಪಕರನ್ನು ಕೇಳಿದರೆ ಅಪ್ಪ ಮಗ ಮುಖ ಮುಖ ನೋಡಿಕೊಂಡರು. ಬಹುಶಃ ನಿರ್ದೇಶಕರು ಯಾರು ಎಂದು ಖಾತ್ರಿ ಪಡಿಸಿಕೊಂಡ ಮೇಲೆ ಚಿತ್ರದ ಕಥಾ ಹಂದರ ಬಗ್ಗೆ ನಿರ್ಮಾಪಕರು ಮಾತನಾಡುವ ಸಾಧ್ಯತೆಯಿದೆ.
ಸೂಪರ್ ಸ್ಟಾರ್ ಉಪೇಂದ್ರ ಅವರ ಯಶಸ್ವಿ ಚಿತ್ರ ಬುದ್ಧಿವಂತ ನಿರ್ದೇಶಿಸಿದ ರಾಮನಾಥ್ ಋಗ್ವೇದಿ ಅವರ ಮೇಲೇ ರೆಹಾನ್ ಎಂಟರ್ ಪ್ರೈಸಸ್ ನಂಬಿಕೆ ಇಟ್ಟು ಚಿತ್ರ ನಿರ್ಮಿಸುತ್ತಿದೆ. ರಾಮ್ ನಾರಾಯಣ್ ಚಿತ್ರಕ್ಕೆ ಸಂಭಾಷಣೆ ಒದಗಿಸಿದ್ದಾರೆ. ಕೃಪಾಕರ್ ಸಂಗೀತ, ಶಂಕರ್ ಛಾಯಾಗ್ರಹಣವಿದೆ.
ಗಂಡ ಹೆಂಡತಿ, ಮೈಲಾಪುರ ಮೈಲಾರಿ ಹಾಡಿನ ಖ್ಯಾತಿಯ ಸಂಜನಾ ರವಿಶಂಕರ್ ಗೆ ಜೋಡಿಯಾಗಿ ನಟಿಸಲಿದ್ದಾರೆ. ಉಳಿದಂತೆ ರಂಗಾಯಣ ರಘು ಹಾಗೂ ಉಳಿದ ಸಿನಿಯರ್ ಪೋಷಕ ನಟ, ನಟಿಯರು ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಫೆ. 1 ಕ್ಕೆ ಸೆಟ್ಟೇರಲಿರುವ ಈ ಚಿತ್ರ ಕಾಮಿಡಿ ಹಾಗೂ ಕುತೂಹಲಭರಿತ ಸನ್ನಿವೇಶಗಳನ್ನು ಒಳಗೊಂಡಿರುತ್ತದೆ ಎಂದು ನಿರ್ಮಾಪಕ ನರ್ಗೀಸ್ ಬಾಬು ಅವರ ಪುತ್ರ ಖಮಾರ್ ಹೇಳುತ್ತಾರೆ. ರೆಹಾನ್ ಎಂಟರ್ ಪ್ರೈಸಸ್ ಈಗಾಗಲೆ ಏಳು ಚಿತ್ರಗಳನ್ನು ತೆರೆಗಿತ್ತ ದಾಖಲೆ ಹೊಂದಿದೆ. [ರವಿಶಂಕರ್]