ಮೇ ತಿಂಗಳಲ್ಲಿ ತೆರೆಗೆ ತುಳು ಚಿತ್ರ ಬಂಗಾರ್ದ ಕುರುಲ್

By Rajendra

ಸುಮಾರು 29 ವರ್ಷಗಳ ನಂತರ ತುಳು ಚಿತ್ರ ನಿರ್ಮಾಣಕ್ಕೆ ಮುಂದಾಗಿರುವ ಹಿರಿಯ ನಿರ್ದೇಶಕ, ನಿರ್ಮಾಪಕ ರಾಮ್‌ಶೆಟ್ಟಿ ಅವರು ಆನಂದ್ ಫಿಲಂಸ್ ಮೂಲಕ ಮೂರನೇ ತುಳು ಚಿತ್ರವಾಗಿ 'ಬಂಗಾರ್ದ ಕುರಲ್' ಎಂಬ ತುಳು ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇದರಲ್ಲಿ ತಮ್ಮ ಮಗ ಆನಂದ್‌ನನ್ನು ಕೂಡ ತುಳು ಚಿತ್ರರಂಗಕ್ಕೆ ಪರಿಚಯ ಮಾಡುತ್ತಿದ್ದಾರೆ. ಈ ಚಿತ್ರ ಮೇ ತಿಂಗಳಲ್ಲಿ ಉಡುಪಿ-ದ.ಕ.ಜಿಲ್ಲೆಯಾದ್ಯಂತ ಬಿಡುಗಡೆಯಾಗಲಿದೆ.

ಬಜ್ಪೆ-ಸುಂಕದಕಟ್ಟೆ ಅನ್ನಪೂರ್ಣೇಶ್ವರಿ ದೇವಸ್ಥಾನ, ಮಂಗಳೂರು-ಮೂಡಬಿದ್ರೆ ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಸುಂಕದಕಟ್ಟೆ ಶ್ರೀಅಂಬಿಕಾಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅಲ್ಲಿನ ಶ್ರೀನಿರಂಜನಸ್ವಾಮಿ ಪದವಿ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಚಿತ್ರದ ನಾಯಕಿ ಪಾಕೀ ಹೆಗ್ಡೆ ಹಾಡಿಗೆ ಭರ್ಜಿರಿಯಾಗಿ ಕುಣಿದಿದ್ದರು. ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಸಾಹಸ ಸನ್ನಿವೇಶಗಳ ಚಿತ್ರೀಕರಣ ಮಾತ್ರ ಬಾಕಿಯಿದೆ.

ಚಿತ್ರದಲ್ಲಿ ಏಳು ಹಾಡುಗಳಿವೆ. ಒಂದಕ್ಕಿಂತ ಒಂದು ಹಾಡು ಅದ್ಭುತವಾಗಿದೆ. ಅವೆಲ್ಲವುಗಳನ್ನೂ ಪ್ರಕೃತಿ ರಮಣೀಯ ಮತ್ತು ಭಕ್ತಿ ಹುಟ್ಟಿಸುವ ಸ್ಥಳಗಳಲ್ಲಿ ರಾಮ್ ಶೆಟ್ಟಿ ಚಿತ್ರೀಕರಣ ನಡೆಸಿದ್ದಾರೆ. ಮೂಡುಬಿದಿರೆಯಲ್ಲಿರುವ ಮಾಜಿ ಸಚಿವ ಅಮರನಾಥ ಶೆಟ್ಟಿ ಅವರ ಮನೆಯಲ್ಲಿ ಚಿತ್ರೀಕರಣ ನಡೆದಿದೆ. ಚಿತ್ರೀಕರಣ ವೀಕ್ಷಿಸಿದ ಅಮರನಾಥ ಶೆಟ್ಟಿ ಅವರು ರಾಮ್ ಶೆಟ್ಟಿ ಅವರ ಸಿನಿಮಾ ಕರ್ತವ್ಯದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡೆಸಿದ್ದಾರೆ.

ಚಿತ್ರದ ನಾಯಕರಾಗಿ ಹಿರಿಯ ನಟ ಶಿವಧ್ವಜ್ ಅಭಿನಯಿಸಿದ್ದಾರೆ. ಹಿರಿಯ ನಾಟಕಕಾರ ಮಚ್ಚೇಂದ್ರನಾಥ ಪಾಂಡೇಶ್ವರರ ಸಾಹಿತ್ಯವಿರುವ ಚಿತ್ರದ ತಾರಾಬಳಗದಲ್ಲಿ ಶಿವಧ್ವಜ್, ಪಾಕೀ ಹೆಗ್ಡೆ, ನಮೃತಾ ಹೆಗ್ಡೆ, ಸುರೇಶ್ ಮಂಗಳೂರು, ಹರೀಶ್‌ವಾಸು ಶೆಟ್ಟಿ ಮುಂಬಾಯಿ, ವಿಜಯ್‌ಕುಮಾರ್ ಶೆಟ್ಟಿ ಮುಂಬಾಯಿ, ಅರವಿಂದ್ ಬೋಳಾರ್, ಶೋಭಾ ರೈ, ಚಂಚಲಾಕ್ಷಿ, ಜ್ಯೋತಿ ರೈ, ರವಿ ಸುರತ್ಕಲ್, ಪ್ರದೀಪ್ ಚಂದ್ರ, ದಿನೇಶ್ ಅತ್ತಾವರ್, ಪ್ರದೀಪ್ ಆಳ್ವಾ, ಕಿಶೋರಿ ಬಲ್ಲಾಳ್, ಇಂದಿರಾ ಶೇಖರ್, ತಮ್ಮ ಲಕ್ಷ್ಮಣ್ ಮುಂತಾದವರಿದ್ದಾರೆ.

ವಿ.ಮನೋಹರ್ ಸಂಗೀತವಿರುವ ಈ ಚಿತ್ರಕ್ಕೆ ರಾಜು.ಕೆ.ಜಿ ಅವರ ಛಾಯಾಗ್ರಹಣವಿದೆ. ರಾಮ್ ಶೆಟ್ಟಿ ಅವರು ಕಥೆ ಬರೆದಿರುವ ಈ ಚಿತ್ರಕ್ಕೆ ಮಚ್ಚೇಂದ್ರನಾಥ ಪಾಂಡೇಶ್ವರ ಅವರು ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಹರೀಶ್ ಶೆಟ್ಟಿ ಸಾಹಸ ನಿರ್ದೇಶನ, ಮದನ್ ಹರಿಣಿ ನೃತ್ಯ ನಿರ್ದೇಶ, ತಮ್ಮ ಲಕ್ಷ್ಮಣ ಕಲಾ ನಿರ್ದೇಶನ, ನಾಸಿರ್ ಹಕೀಂ ಸಂಕಲನ ಹಾಗೂ ಶಿವಾರ್ಜುನ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ.

ಖ್ಯಾತ ಸಾಹಸ ನಿರ್ದೇಶಕ ರಾಮ್‌ಶೆಟ್ಟಿ 29 ವರ್ಷಗಳ ನಂತರ ತುಳು ಚಿತ್ರ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಹಿಂದಿಯಲ್ಲಿ ಖತರ್‌ನಾಕ್, ಮರಾಠಿಯಲ್ಲಿ ಹಲವು ಚಿತ್ರಗಳನ್ನು ನಿರ್ಮಿಸಿದ್ದ ರಾಮ್‌ಶೆಟ್ಟಿ, ಡಾ.ರಾಜಕುಮಾರ್, ಡಾ.ವಿಷ್ಣುವರ್ಧನ್ ಮೊದಲಾದ ಕಲಾವಿದರ ಚಿತ್ರಗಳಿಂದ ಹಿಡಿದು ಈಗಿನ ಪುನೀತ್‌ರಾಜಕುಮಾರ್, ಶಿವರಾರಾಜಕುಮಾರ್ ಮುಂತಾದ ಕಲಾವಿದರ ಚಿತ್ರಗಳಿಗೆ ಸಾಹಸ ನಿರ್ದೇಶನ ಮಾಡಿದ್ದಾರೆ. ತುಳುವಿನಲ್ಲಿ ದಾರೆದ ಸೀರೆ, ಬದ್ಕೆರೆ ಬುಡ್ಲೆ ಸಿನಿಮಾ ನಿರ್ಮಿಸಿದ್ದಾರೆ. ಈಗ ಮಗ ಆನಂದ್ ಶೆಟ್ಟಿ ಅವರನ್ನು ಖಳಪಾತ್ರದ ಮೂಲಕ ತುಳು ಚಿತ್ರರಂಗಕ್ಕೆ ಪರಿಚಯಿಸಿ 'ಬಂಗಾರ್ದ ಕುರಲ್' ಸಿನಿಮಾ ನಿರ್ದೇಶಿಸಿ ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. (ಒನ್‌ಇಂಡಿಯಾ ಕನ್ನಡ)

More from Filmibeat

English summary
Senior stunt director Ram Shettys’ Tulu film 'Bangarda Kural' is all set to be released by May 2012. Ram Shetty has directed 445 films in Hindi, 65 in Kannada and 51 in Odissi. The film has Shivadhwaj in the lead role, supported by actors of repute like Machendranath Pandeshwar, Tamma Lakshman, Anand Shetty, Shobha Rai, Namrata Hegde, Suresh.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X