twitter
    For Quick Alerts
    ALLOW NOTIFICATIONS  
    For Daily Alerts

    ವಾಯುಪುತ್ರ ಚಿತ್ರದ ಟ್ರೈಲರ್

    By Staff
    |

    ದಕ್ಷಿಣ ಭಾರತದ ಪ್ರಸಿದ್ಧ ನಟ, ಕರುನಾಡ ಕುವರ ಅರ್ಜುನ್ ಸರ್ಜಾ ನಿರ್ಮಾಣದ 'ವಾಯುಪುತ್ರ" ಸೆಪ್ಟೆಂಬರ್ 3ರಂದು ತೆರೆಕಾಣಲಿದೆ. ಬೆಂಗಳೂರಿನಲ್ಲಿ ಪಿವಿಆರ್ ಸೇರಿದಂತೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಸರ್ಜಾ ಕುಟುಂಬದ ಮತ್ತೊಂದು ಕುಡಿ ಚಿರಂಜೀವಿ ಸರ್ಜಾ ಈ ಚಿತ್ರದಲ್ಲಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.

    ಹಿಂದೆ ಕೆಲವು ಉತ್ತಮ ಚಿತ್ರಗಳನ್ನು ನಿರ್ದೇಶಿಸಿದ್ದ ಕಿಶೋರ್‌ಸರ್ಜಾ ಈ ಚಿತ್ರದ ನಿರ್ದೇಶಕರು. ಪ್ರಸ್ತುತ ಚಿತ್ರದ ಚಿತ್ರೀಕರಣ ಪೂರೈಸಿದ ಅವರು ನಂತರ ಇಹಲೋಕ ತ್ಯಜಿಸಿದ್ದು ಬೇಸರದ ಸಂಗತಿ. ವಿ.ಹರಿಕೃಷ್ಣ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿರುವ 'ವಾಯುಪುತ್ರ"ಚಿತ್ರದ ಹಾಡುಗಳು ಜನ ಮನ್ನಣೆಗೆ ಪಾತ್ರವಾಗಿದೆ ಎಂದು ಆಕಾಶ್ ಆಡಿಯೋ ಸಂಸ್ಥೆ ಮಾಲೀಕರಾದ ಮಧುಬಂಗಾರಪ್ಪ ತಿಳಿಸಿದ್ದಾರೆ.

    (ದಟ್ಸ್ ಕನ್ನಡ ವಿಡಿಯೋ)

    Thursday, August 27, 2009, 14:23
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X