Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೂಡಲ ಮನೆ ಖ್ಯಾತಿಯ ವೈಶಾಲಿ ಕಾಸರವಳ್ಳಿ ಇನ್ನಿಲ್ಲ
ನಾಲ್ಕು ವರ್ಷಗಳ ಹಿಂದೆ ಅವರಕಿಡ್ನಿ ವೈಫಲ್ಯವಾಗಿತ್ತು. ಒಂದು ವಾರದ ಹಿಂದಷ್ಟೆ ಅವರನ್ನು ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಸಂಜೆ ಸುಮಾರು 5.30ರ ಸಮಯದಲ್ಲಿ ವೈಶಾಲಿ ಅವರು ಕೊನೆಯುಸಿರೆಳೆದಿದ್ದಾರೆ. ಇಬ್ಬರು ಮಕ್ಕಳಾದ ಅನನ್ಯ ಕಾಸರವಳ್ಳಿ, ಅಪೂರ್ವ ಕಾಸರವಳ್ಳಿ ಹಾಗೂ ಪತಿ ಗಿರೀಶ್ ಕಾಸರವಳ್ಳಿ ಅವರನ್ನು ಅಗಲಿದ್ದಾರೆ.
ವೈಶಾಲಿ ಕಾಸರವಳ್ಳಿ ಅವರು ಹುಟ್ಟಿದ್ದು ಗುಲ್ಬರ್ಗದಲ್ಲಿ ಏಪ್ರಿಲ್ 12,1952ರಲ್ಲಿ. ಗುಬ್ಬಿ ಕಂಪನಿಯಲ್ಲಿ ನಟಿಯಾಗಿ ರಂಗಪ್ರವೇಶ ಮಾಡಿದ ವೈಶಾಲಿ ಅವರು ಬಳಿಕ ರಂಗಭೂಮಿ, ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿದರು. ವೈಶಾಲಿ ಅವರು ನಟಿಸಿದ ಮೊದಲ ಚಿತ್ರ 'ಯಾವ ಜನ್ಮದ ಮೈತ್ರಿ'. ಅವರ ಕಿರುತೆರೆ ಧಾರಾವಾಹಿಗಳಾದ 'ಮೂಡಲ ಮನೆ', 'ಮುತ್ತಿನ ತೋರಣ', 'ಮೌನರಾಗ' ಬಹಳಷ್ಟು ಜನಮನ್ನಣೆಗೆ ಪಾತ್ರವಾಗಿದ್ದವು.
ಗಿರೀಶ್ ಕಾಸರವಳ್ಳಿ ನಿರ್ದೇಶನದ 'ತಾಯಿ ಸಾಹೇಬ' ಚಿತ್ರದಲ್ಲಿನ ವಸ್ತ್ರ ವಿನ್ಯಾಸಕ್ಕಾಗಿ ಅವರು ರಾಷ್ಟ್ರ ಪ್ರಶಸ್ತಿಗೆ ಪಾತ್ರರಾಗಿದ್ದರು. ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿಗಳಿಗೂ ವೈಶಾಲಿ ಅವರು ಭಾಜನರಾಗಿದ್ದರು. ಪ್ರೊಫೆಸರ್ ಹುಚ್ಚುರಾಯ, ಮಾನಸ ಸರೋವರ, ಮಮತೆಯ ಮಡಿಲು, ಭೂತಯ್ಯನ ಮಗ ಅಯ್ಯು ಸೇರಿದಂತೆ 70ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
ಮೂಲತಃ ರಂಗಭೂಮಿ ಕಲಾವಿದೆಯಾದ ವೈಶಾಲಿ ಅವರು ಸಿನಿಮಾವೊಂದನ್ನು ನಿರ್ದೇಶಿಸಬೇಕು ಎಂದು ಕನಸು ಕಂಡಿದ್ದರು. ಆದರೆ ಚಿತ್ರವನ್ನು ನಿರ್ದೇಶಿಸಬೇಕು ಎಂಬ ಅವರ ಆಸೆ ಕಡೆಗೂ ನೆರವೇರದ್ದು ವಿಧಿ ವೈಚಿತ್ರ್ಯ. ಹಿಂದಿ ಮತ್ತು ಮರಾಠಿಯ ಕೆಲವು ನಾಟಕಗಳನ್ನು ವೈಶಾಲಿ ಅವರು ಕನ್ನಡಕ್ಕೆ ಭಾಷಾಂತರ ಮಾಡಿದ್ದಾರೆ. ನಟಿ ತಾರಾ, ಮುಖ್ಯಮಂತ್ರಿ ಚಂದ್ರು, ದ್ವಾರಕೀಶ್, ಉಮಾಶ್ರೀ, ದೊಡ್ಡಣ್ಣ ಸೇರಿದಂತೆ ಕನ್ನಡ ಚಿತ್ರರಂಗ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.