Don't Miss!
- News Namma Metro: 2023-24ರಲ್ಲಿ ಮೆಟ್ರೋ ವಾರ್ಷಿಕ ಆದಾಯದಲ್ಲಿ ಭಾರೀ ಏರಿಕೆ: ಖರ್ಚು-ಆದಾಯದ ಮಾಹಿತಿ?
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Sports IPL 2024: ಮುಂಬೈ ಇಂಡಿಯನ್ಸ್ ವಿರುದ್ಧ ಶತಕ; ರೋಹಿತ್, ಕೊಹ್ಲಿಗೆ ಕ್ರೆಡಿಟ್ ನೀಡಿದ ಯಶಸ್ವಿ ಜೈಸ್ವಾಲ್!
- Technology Itel: ಭಾರತದಲ್ಲಿ ಐಟೆಲ್ S24 ಲಾಂಚ್! 108MP ಕ್ಯಾಮೆರಾ.. ಬೆಲೆ ಇಷ್ಟೇ
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಫಾಲ್ಕೆ ಪುರಸ್ಕೃತ ಮೂರ್ತಿ ಸಂಜೆಗಣ್ಣಿನ ಹಿನ್ನೋಟ
ಮಾರ್ಚ್ 27ರ ಶುಕ್ರವಾರ ರೇಸ್ ಕೋರ್ಸ್ ರಸ್ತೆಯ ಭಾರತೀಯ ವಿದ್ಯಾಭವನದ ಖಿಂಚ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಂಜೆ 3 ಗಂಟೆಗೆ ವಿ ಕೆ ಮೂರ್ತಿ ಅವರ ಅಧ್ಬುತ ದೃಶ್ಯ ಕಾವ್ಯ ಪ್ಯಾಸಾ (1957) ಚಿತ್ರದ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಚಿತ್ರರಸಿಕರು ಈ ಕಾರ್ಯಕ್ರಮವನ್ನು ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕೋರಲಾಗಿದೆ.
ಚಿತ್ರ ಪ್ರದರ್ಶನದ ಬಳಿಕ ಅಂದರೆ ಸಂಜೆ 6 ಗಂಟೆಯ ನಂತರ ವಿ ಕೆ ಮೂರ್ತಿ ಸಹೃದಯರೊಂದಿಗೆ ಚರ್ಚಿಸಲಿದ್ದಾರೆ. ಸಿನಿಮಾ ಛಾಯಾಗ್ರಾಹಕ ನವರೋಜ್ ಅವರು ಮೂರ್ತಿಅವರಿಗೆ ಸ್ವಾಗತಕೋರಲಿದ್ದು ಇದೇ ಸಂದರ್ಭದಲ್ಲಿ ಗೋವಿಂದ ನಿಹಲಾನಿ ಅವರ ಕಿರು ಚಿತ್ರ ಪ್ರದರ್ಶನವಿರುತ್ತದೆ. ವಿ ಕೆ ಮೂರ್ತಿ ಅವರೊಂದಿಗೆ ಕಳೆದ ದಿನಗಳನ್ನು ಗೋವಿಂದ ನಿಹಲಾನಿ ಸಹೃದಯರ ಜೊತೆ ಹಂಚಿಕೊಳ್ಳಲಿದ್ದಾರೆ.
ವಿ ಕೆ ಮೂರ್ತಿ ಅವರ ಆತ್ಮಕತೆ ಬರೆದಿರುವ ಉಮಾರಾವ್ ಅವರು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು ಮೂರ್ತಿ ಕುರಿತ ಪುಸ್ತಕದ ಬಗ್ಗೆ ಮತನಾಡಲಿದ್ದಾರೆ. ಈ ಒಂದು ಅಪರೂಪದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಮುಕ್ತ ಆಹ್ವಾನ ನೀಡಲಾಗಿದೆ. ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಛಾಯಾಗ್ರಾಹಕರಲ್ಲೊಬ್ಬರಾದ ಮೂರ್ತಿ ಅವರ ಸಂಜೆಗಣ್ಣಿನ ಹಿನ್ನೋಟ ನಿಮ್ಮ ಮುಂದೆ ನಿಲ್ಲದೆ.