Don't Miss!
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- News RCB vs KKR: ಕ್ರಿಕೆಟ್ ಪ್ರೇಮಿಗಳೇ... ಪ್ರಯಾಣಿಕರೇ ರಸ್ತೆಗಿಳಿಯುವ ಮುನ್ನ ಒಮ್ಮೆ ಗಮನಿಸಿ
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಫಾಲ್ಕೆ ಪುರಸ್ಕೃತ ಮೂರ್ತಿ ಸಂಜೆಗಣ್ಣಿನ ಹಿನ್ನೋಟ
ಮಾರ್ಚ್ 27ರ ಶುಕ್ರವಾರ ರೇಸ್ ಕೋರ್ಸ್ ರಸ್ತೆಯ ಭಾರತೀಯ ವಿದ್ಯಾಭವನದ ಖಿಂಚ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಂಜೆ 3 ಗಂಟೆಗೆ ವಿ ಕೆ ಮೂರ್ತಿ ಅವರ ಅಧ್ಬುತ ದೃಶ್ಯ ಕಾವ್ಯ ಪ್ಯಾಸಾ (1957) ಚಿತ್ರದ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಚಿತ್ರರಸಿಕರು ಈ ಕಾರ್ಯಕ್ರಮವನ್ನು ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕೋರಲಾಗಿದೆ.
ಚಿತ್ರ ಪ್ರದರ್ಶನದ ಬಳಿಕ ಅಂದರೆ ಸಂಜೆ 6 ಗಂಟೆಯ ನಂತರ ವಿ ಕೆ ಮೂರ್ತಿ ಸಹೃದಯರೊಂದಿಗೆ ಚರ್ಚಿಸಲಿದ್ದಾರೆ. ಸಿನಿಮಾ ಛಾಯಾಗ್ರಾಹಕ ನವರೋಜ್ ಅವರು ಮೂರ್ತಿಅವರಿಗೆ ಸ್ವಾಗತಕೋರಲಿದ್ದು ಇದೇ ಸಂದರ್ಭದಲ್ಲಿ ಗೋವಿಂದ ನಿಹಲಾನಿ ಅವರ ಕಿರು ಚಿತ್ರ ಪ್ರದರ್ಶನವಿರುತ್ತದೆ. ವಿ ಕೆ ಮೂರ್ತಿ ಅವರೊಂದಿಗೆ ಕಳೆದ ದಿನಗಳನ್ನು ಗೋವಿಂದ ನಿಹಲಾನಿ ಸಹೃದಯರ ಜೊತೆ ಹಂಚಿಕೊಳ್ಳಲಿದ್ದಾರೆ.
ವಿ ಕೆ ಮೂರ್ತಿ ಅವರ ಆತ್ಮಕತೆ ಬರೆದಿರುವ ಉಮಾರಾವ್ ಅವರು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು ಮೂರ್ತಿ ಕುರಿತ ಪುಸ್ತಕದ ಬಗ್ಗೆ ಮತನಾಡಲಿದ್ದಾರೆ. ಈ ಒಂದು ಅಪರೂಪದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಮುಕ್ತ ಆಹ್ವಾನ ನೀಡಲಾಗಿದೆ. ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಛಾಯಾಗ್ರಾಹಕರಲ್ಲೊಬ್ಬರಾದ ಮೂರ್ತಿ ಅವರ ಸಂಜೆಗಣ್ಣಿನ ಹಿನ್ನೋಟ ನಿಮ್ಮ ಮುಂದೆ ನಿಲ್ಲದೆ.