Don't Miss!
- News Mysore Candidate : ಮೈಸೂರಿನಲ್ಲಿ ಬಿಜೆಪಿಯಿಂದ ರಾಜವಂಶಸ್ಥ- ಕಾಂಗ್ರೆಸ್ ಲೆಕ್ಕಾಚಾರವೇನು?
- Lifestyle ಕೆಜಿಎಫ್ ಎಲ್ ಡೊರಾಡೊ ಕಥೆ ಕೇಳಿದ್ದೀರಾ? ಇದು ಸಮುದ್ರದಲ್ಲಿ ಮುಳುಗಿದ ಎಲ್ ಡೊರಾಡೊ ಹಡಗಿನ ಕಥೆ..!
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Automobiles ಕಾಶ್ಮೀರ ಟು ಕನ್ಯಾಕುಮಾರಿ ಟ್ರಿಪ್ ಮುಗಿಸಿದ ಎಲೆಕ್ಟ್ರಿಕ್ ಸ್ಕೂಟರ್: ಗೇಮ್ ಚೇಂಜರ್ ಸದ್ಯದಲ್ಲೇ ಅಖಾಡಕ್
- Technology iPhone: ಐಫೋನ್ 16 ನಲ್ಲಿ ಆಪಲ್ನಿಂದ ನಿರೀಕ್ಷಿಸಬಹುದಾದ ದೊಡ್ಡ ನವೀಕರಣಗಳಿವು!ಇಷ್ಟ ಆಗದೇ ಇರದು
- Sports IPL 2024: RCB ಫ್ಯಾನ್ಸ್ ಕಂಡರೆ ಹೆಚ್ಚು ಹೆದರುತ್ತೇನೆ; ಅವೇಶ್ ಖಾನ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯೋಗರಾಜ್ ಭಟ್ಟರ 'ಡ್ರಾಮಾ'ಕ್ಕೆ ಪ್ರಕಾಶ್ ರೈ
ಭಟ್ಟರ ಡ್ರಾಮಾ ತಂಡದಿಂದ ಹೊಸ ಹೊಸ ಸುದ್ದಿಗಳು ಬರುತ್ತಿವೆ. ಮುಹೂರ್ತವಿನ್ನೂ ಆಗಿಲ್ಲ. ಅದಕ್ಕೂ ಮೊದಲೇ ಸಾಕಷ್ಟು ಬದಲಾವಣೆಗಳು, ವಿಶೇಷ ಸಮಾಚಾರಗಳು ಒಂದೊಂದಾಗಿ ಈಚೆ ಬರುತ್ತಿವೆ. ಭಟ್ಟರ ಚಿತ್ರದಿಂದ ನಟಿ ಭಾಮಾ 'ಔಟ್' ಆಗಿ ಆ ಜಾಗಕ್ಕೆ ರಾಧಿಕಾ ಪಂಡಿತ್ 'ಇನ್' ಆಗಿರುವುದು ಈಗ ಹಳೇ ಸುದ್ದಿ. ಹೊಸ ಸುದ್ದಿಯೆಂದರೆ ಡ್ರಾಮಾ ತಂಡಕ್ಕೆ ಪ್ರಕಾಶ್ ರೈ ಹೊಸತಾಗಿ ಸೇರ್ಪಡೆಯಾಗಿದ್ದಾರೆ.
ಭಟ್ಟರು ಮೊನ್ನೆ ಜಯಣ್ಣನ ಜೊತೆಗೂಡಿ ಚೆನ್ನೈಗೆ ಹೋಗಿದ್ದರು. ಅಲ್ಲಿ ಪ್ರಕಾಶ್ ರೈ ಭೇಟಿಯಾಗಿ ಅವರ ಕಾಲ್ ಶೀಟ್ ಪಕ್ಕಾ ಮಾಡಿಕೊಂಡು ಬಂದಿದ್ದಾರೆ. ಅಂದಹಾಗೆ, ನಾಯಕ ಯಶ್ ಹಾಗೂ ಪ್ರಕಾಶ್ ರೈ ಎರಡನೇ ಬಾರಿಗೆ ಜೊತೆಯಾಗುತ್ತಿದ್ದಾರೆ. ಈ ಮೊದಲು ರಾಜಧಾನಿಯಲ್ಲಿ ಯಶ್, ರೈ ಒಟ್ಟಾಗಿ ನಟಿಸಿದ್ದರು.
ಮಾರ್ಚ್ ಮೊದಲ ವಾರದಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದ್ದು ಅದಕ್ಕೂ ಮೊದಲು ಮುಹೂರ್ತ ಗ್ಯಾರಂಟಿ ಎನ್ನಲಾಗಿದೆ. ರಾಧಿಕಾ ಪಂಡಿತ್ ಮತ್ತು ಯಶ್, ಅಷ್ಟರಲ್ಲಿ ತಮ್ಮ ಕೈನಲ್ಲಿರುವ ಚಿತ್ರಗಳ ಚಿತ್ರೀಕರಣ ಮುಗಿಸಿ ಭಟ್ಟರ ಚಿತ್ರಕ್ಕೆ ಹಾಜರಿ ನೀಡಲಿದ್ದಾರೆ. ಪರಭಾಷೆಯಲ್ಲಿ ಮಿಂಚುತ್ತಿರುವ ಕನ್ನಡಿಗ ಪ್ರಕಾಶ್ ರೈ ಅವರನ್ನು ಭಟ್ಟರ ಡ್ರಾಮಾ ಮೂಲಕ ಮತ್ತೊಮ್ಮೆ ಕನ್ನಡಿಗರು ನೋಡಬಹುದು. (ಒನ್ ಇಂಡಿಯಾ ಕನ್ನಡ)