Don't Miss!
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- News Realme: ಅಗ್ಗದ 5G ಸ್ಮಾರ್ಟ್ಫೋನ್ ಬಿಡುಗಡೆ ರೆಡಿ; ಇದರ ಬೆಲೆ ಎಷ್ಟು ಗೊತ್ತಾ?
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯೋಗರಾಜ್ ಭಟ್ಟರ 'ಡ್ರಾಮಾ'ಕ್ಕೆ ಪ್ರಕಾಶ್ ರೈ
ಭಟ್ಟರ ಡ್ರಾಮಾ ತಂಡದಿಂದ ಹೊಸ ಹೊಸ ಸುದ್ದಿಗಳು ಬರುತ್ತಿವೆ. ಮುಹೂರ್ತವಿನ್ನೂ ಆಗಿಲ್ಲ. ಅದಕ್ಕೂ ಮೊದಲೇ ಸಾಕಷ್ಟು ಬದಲಾವಣೆಗಳು, ವಿಶೇಷ ಸಮಾಚಾರಗಳು ಒಂದೊಂದಾಗಿ ಈಚೆ ಬರುತ್ತಿವೆ. ಭಟ್ಟರ ಚಿತ್ರದಿಂದ ನಟಿ ಭಾಮಾ 'ಔಟ್' ಆಗಿ ಆ ಜಾಗಕ್ಕೆ ರಾಧಿಕಾ ಪಂಡಿತ್ 'ಇನ್' ಆಗಿರುವುದು ಈಗ ಹಳೇ ಸುದ್ದಿ. ಹೊಸ ಸುದ್ದಿಯೆಂದರೆ ಡ್ರಾಮಾ ತಂಡಕ್ಕೆ ಪ್ರಕಾಶ್ ರೈ ಹೊಸತಾಗಿ ಸೇರ್ಪಡೆಯಾಗಿದ್ದಾರೆ.
ಭಟ್ಟರು ಮೊನ್ನೆ ಜಯಣ್ಣನ ಜೊತೆಗೂಡಿ ಚೆನ್ನೈಗೆ ಹೋಗಿದ್ದರು. ಅಲ್ಲಿ ಪ್ರಕಾಶ್ ರೈ ಭೇಟಿಯಾಗಿ ಅವರ ಕಾಲ್ ಶೀಟ್ ಪಕ್ಕಾ ಮಾಡಿಕೊಂಡು ಬಂದಿದ್ದಾರೆ. ಅಂದಹಾಗೆ, ನಾಯಕ ಯಶ್ ಹಾಗೂ ಪ್ರಕಾಶ್ ರೈ ಎರಡನೇ ಬಾರಿಗೆ ಜೊತೆಯಾಗುತ್ತಿದ್ದಾರೆ. ಈ ಮೊದಲು ರಾಜಧಾನಿಯಲ್ಲಿ ಯಶ್, ರೈ ಒಟ್ಟಾಗಿ ನಟಿಸಿದ್ದರು.
ಮಾರ್ಚ್ ಮೊದಲ ವಾರದಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದ್ದು ಅದಕ್ಕೂ ಮೊದಲು ಮುಹೂರ್ತ ಗ್ಯಾರಂಟಿ ಎನ್ನಲಾಗಿದೆ. ರಾಧಿಕಾ ಪಂಡಿತ್ ಮತ್ತು ಯಶ್, ಅಷ್ಟರಲ್ಲಿ ತಮ್ಮ ಕೈನಲ್ಲಿರುವ ಚಿತ್ರಗಳ ಚಿತ್ರೀಕರಣ ಮುಗಿಸಿ ಭಟ್ಟರ ಚಿತ್ರಕ್ಕೆ ಹಾಜರಿ ನೀಡಲಿದ್ದಾರೆ. ಪರಭಾಷೆಯಲ್ಲಿ ಮಿಂಚುತ್ತಿರುವ ಕನ್ನಡಿಗ ಪ್ರಕಾಶ್ ರೈ ಅವರನ್ನು ಭಟ್ಟರ ಡ್ರಾಮಾ ಮೂಲಕ ಮತ್ತೊಮ್ಮೆ ಕನ್ನಡಿಗರು ನೋಡಬಹುದು. (ಒನ್ ಇಂಡಿಯಾ ಕನ್ನಡ)