twitter
    For Quick Alerts
    ALLOW NOTIFICATIONS  
    For Daily Alerts

    ವಿದ್ಯಾರ್ಥಿಗಳ ಹೃದಯ ಸೂರೆಗೊಂಡ ಗಣೇಶ್

    By Rajendra
    |

    ಮೈಸೂರು ಮಹಾರಾಜ ಕಾಲೇಜಿನಲ್ಲಿ ಸಂಭ್ರಮದ ವಾತಾವರಣ. ಈ ಸಂಭ್ರಮಕ್ಕೆ ಕಾರಣರಾದವರು ಗೋಲ್ಡನ್ ಸ್ಟಾರ್ ಗಣೇಶ್. ವಿವಿಧ ಕಾಲೇಜುಗಳ 2010-11ನೇ ಸಾಲಿನ ಸಾಂಸ್ಕೃತಿಕ ಚಟುವಟಿಕೆಗಳಿಗೆ ಗಣೇಶ್ ಶುಕ್ರವಾರ ಚಾಲನೆ ನೀಡಿದರು. ವಿದ್ಯಾರ್ಥಿಗಳ ಸಡಗರ, ಸಂಭ್ರಮ ಮುಗಿಲು ಮುಟ್ಟಿತ್ತು.

    ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಗಣೇಶ್, ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಿದರು. ತಮ್ಮ ಶಾಲಾ ದಿನಗಳನ್ನು ನೆನಪಿಸಿಕೊಂಡ ಗಣೇಶ್, ತಾವು ವಿದ್ಯಾರ್ಥಿಯಾಗಿದ್ದಾಗ ಕಲಾವಿದನಾಗಬೇಕೆಂದು ಕನಸು ಕಾಣುತ್ತಿದೆ. ಓದಿನ ಜೊತೆಗೆ ನಟನೆಯ ತರಬೇತಿಯನ್ನು ಪಡೆಯುತ್ತಿದ್ದೆ ಎಂದರು.

    ಈ ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳು ಭಾಗವಹಿಸಿದ್ದವು. ವಿದ್ಯಾರ್ಥಿ ಸಮೂಹ ತಮ್ಮ ನೆಚ್ಚಿನ ನಾಯಕ ಗಣೇಶನನ್ನು ಹತ್ತಿರದಿಂದ ನೋಡಿ ಸಂತಸ ಪಟ್ಟರು. ಒಂದೆರಡು ಡೈಲಾಗ್ ಹೊಡೆಯುವಂತೆ ಒತ್ತಾಯಿಸಿದರು. ಗಣೇಶ್ ಅವರನ್ನು ನಿರಾಸೆಗೊಳಿಸಲಿಲ್ಲ.

    Saturday, August 28, 2010, 15:19
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X