Don't Miss!
- Sports DC vs SRH: ಟ್ರಾವಿಸ್ ಹೆಡ್, ಅಭಿಷೇಕ್ ದಾಖಲೆಯ ಜೊತೆಯಾಟ: ಡೆಲ್ಲಿ ಗೆಲುವಿಗೆ ಬೃಹತ್ ಗುರಿ
- News ಕಲೆ ಮತ್ತು ಕಲೆಗಾರ! ಪ್ರಧಾನಿ ನರೇಂದ್ರ ಮೋದಿ ಕಾಲೆಳೆದ ಸಿಎಂ ಸಿದ್ದರಾಮಯ್ಯ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಡಿಂಗ್ರಿ ನಾಗರಾಜ್ ಪ್ರಾಣಾಪಾಯದಿಂದ ಪಾರು
ಯಾಕೋ ಏನೋ ಹಾಸ್ಯ ನಟರ ನಸೀಬು ಚೆನ್ನಾಗಿಲ್ಲ ಅನ್ನಿಸುತ್ತದೆ. ಮೊನ್ನೆಮೊನ್ನೆ ಕಾರು ಅಪಘಾತದಲ್ಲಿ ಹಿರಿಯ ಹಾಸ್ಯ ಕಲಾವಿದ ಕರಿಬಸವಯ್ಯ ನಿಧನರಾದರು. ತೀರಾ ಇತ್ತೀಚೆಗೆ ಬುಲೆಟ್ ಪ್ರಕಾಶ್ ಕಾರು ಅಪಘಾತದಲ್ಲಿ ಕಾಲಿನ ಮೂಳೆ ಮುರಿದುಕೊಂಡಿದ್ದಾರೆ. ಈಗ ಮತ್ತೋರ್ವ ಹಿರಿಯ ಹಾಸ್ಯ ನಟ ಡಿಂಗ್ರಿ ನಾಗರಾಜ್ಗೆ ಕಾರು ಅಪಘಾತವಾಗಿದೆ.
ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಪಡೆಯುತ್ತಿರುವ ಅವರು ಚೇತರಿಸಿಕೊಳ್ಳುತ್ತಿದ್ದಾರೆ. (ಇದನ್ನೂ ಓದಿ: ಕರಿಬಸವಯ್ಯ ಕಾರು ಆಕ್ಸಿಡೆಂಟ್; ಡಿಂಗ್ರಿ ಹೇಳಿದ ಸತ್ಯ)
ಅಪಘಾತ ಎಲ್ಲಿ ಹೇಗೆ ಯಾವಾಗ ಸಂಭವಿಸಿತು ಎಂಬ ಬಗ್ಗೆ ಇನ್ನಷ್ಟೇ ನಿಖರ ಮಾಹಿತಿ ತಿಳಿಯಬೇಕಾಗಿದೆ. ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಒನ್ಇಂಡಿಯಾ ಕನ್ನಡ ಹಾರೈಸುತ್ತದೆ. ಡಿಂಗ್ರಿ ನಾಗರಾಜ್ 380ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
ಬಡಕಲು ದೇಹ, ಕುಳ್ಳಗೆ, ಕೀರಲು ಧ್ವನಿಯ ಮೂಲಕವೇ ಪ್ರೇಕ್ಷಕರನ್ನು ಹೊಟ್ಟೆ ಹುಣ್ಣಾಗುವಂತೆ ನಗಿಸಿದ ಪ್ರತಿಭಾವಂತ ಹಾಸ್ಯ ನಟ ಡಿಂಗ್ರಿ ನಾಗರಾಜ್. 'ಪರಸಂಗದ ಗೆಂಡೆ ತಿಮ್ಮ' (1977) ಚಿತ್ರದ ಮೂಲಕ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಡಿಂಗ್ರಿ ಅದೆಷ್ಟೋ ಒಳ್ಳೊಳ್ಳೆ ಪಾತ್ರಗಳ ಮೂಲಕ ಗಮನಸೆಳೆದವರು. ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ. (ಒನ್ಇಂಡಿಯಾ ಕನ್ನಡ)