Don't Miss!
- News ಮೈತ್ರಿ ಹೆಸರಿನಲ್ಲಿ ಬೆನ್ನಿಗೆ ಚೂರಿ ಹಾಕಿದರು; ಎಚ್.ಡಿ. ಕುಮಾರಸ್ವಾಮಿ ಆಕ್ರೋಶ
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಡಿಂಗ್ರಿ ನಾಗರಾಜ್ ಪ್ರಾಣಾಪಾಯದಿಂದ ಪಾರು
ಯಾಕೋ ಏನೋ ಹಾಸ್ಯ ನಟರ ನಸೀಬು ಚೆನ್ನಾಗಿಲ್ಲ ಅನ್ನಿಸುತ್ತದೆ. ಮೊನ್ನೆಮೊನ್ನೆ ಕಾರು ಅಪಘಾತದಲ್ಲಿ ಹಿರಿಯ ಹಾಸ್ಯ ಕಲಾವಿದ ಕರಿಬಸವಯ್ಯ ನಿಧನರಾದರು. ತೀರಾ ಇತ್ತೀಚೆಗೆ ಬುಲೆಟ್ ಪ್ರಕಾಶ್ ಕಾರು ಅಪಘಾತದಲ್ಲಿ ಕಾಲಿನ ಮೂಳೆ ಮುರಿದುಕೊಂಡಿದ್ದಾರೆ. ಈಗ ಮತ್ತೋರ್ವ ಹಿರಿಯ ಹಾಸ್ಯ ನಟ ಡಿಂಗ್ರಿ ನಾಗರಾಜ್ಗೆ ಕಾರು ಅಪಘಾತವಾಗಿದೆ.
ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಪಡೆಯುತ್ತಿರುವ ಅವರು ಚೇತರಿಸಿಕೊಳ್ಳುತ್ತಿದ್ದಾರೆ. (ಇದನ್ನೂ ಓದಿ: ಕರಿಬಸವಯ್ಯ ಕಾರು ಆಕ್ಸಿಡೆಂಟ್; ಡಿಂಗ್ರಿ ಹೇಳಿದ ಸತ್ಯ)
ಅಪಘಾತ ಎಲ್ಲಿ ಹೇಗೆ ಯಾವಾಗ ಸಂಭವಿಸಿತು ಎಂಬ ಬಗ್ಗೆ ಇನ್ನಷ್ಟೇ ನಿಖರ ಮಾಹಿತಿ ತಿಳಿಯಬೇಕಾಗಿದೆ. ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಒನ್ಇಂಡಿಯಾ ಕನ್ನಡ ಹಾರೈಸುತ್ತದೆ. ಡಿಂಗ್ರಿ ನಾಗರಾಜ್ 380ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
ಬಡಕಲು ದೇಹ, ಕುಳ್ಳಗೆ, ಕೀರಲು ಧ್ವನಿಯ ಮೂಲಕವೇ ಪ್ರೇಕ್ಷಕರನ್ನು ಹೊಟ್ಟೆ ಹುಣ್ಣಾಗುವಂತೆ ನಗಿಸಿದ ಪ್ರತಿಭಾವಂತ ಹಾಸ್ಯ ನಟ ಡಿಂಗ್ರಿ ನಾಗರಾಜ್. 'ಪರಸಂಗದ ಗೆಂಡೆ ತಿಮ್ಮ' (1977) ಚಿತ್ರದ ಮೂಲಕ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಡಿಂಗ್ರಿ ಅದೆಷ್ಟೋ ಒಳ್ಳೊಳ್ಳೆ ಪಾತ್ರಗಳ ಮೂಲಕ ಗಮನಸೆಳೆದವರು. ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ. (ಒನ್ಇಂಡಿಯಾ ಕನ್ನಡ)