Don't Miss!
- Automobiles 5 ರೂ. ಚಿಲ್ಲರೆ ಕೊಟ್ಟಿಲ್ಲವೆಂದು ರೊಚ್ಚಿಗೆದ್ದ ಪ್ರಯಾಣಿಕ: ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದೇನು ಗೊತ್ತಾ?
- News India Weather: ಮುಂದಿನ ಮೂರು ದಿನ ದೇಶದ ಈ ಭಾಗದಲ್ಲಿ ಅಬ್ಬರದ ಮಳೆ ಮುನ್ಸೂಚನೆ, ಎಲ್ಲಿಲ್ಲಿ?-ಮಾಹಿತಿ
- Finance Shilpa Shetty: ಇಡಿಯಿಂದ ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ಅವರ 98 ಕೋಟಿ ಮೌಲ್ಯದ 2 ಫ್ಲಾಟ್, ಷೇರು ವಶ
- Technology Realme: ರಿಯಲ್ಮಿ C65 5G ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! 6.67″ 120Hz ಡಿಸ್ಪ್ಲೆ...
- Lifestyle ಮಾಲ್ನೊಳಗೆ ನುಗ್ಗಿದ 100ಕ್ಕೂ ಹೆಚ್ಚು ನಾಯಿಗಳು..! ಕೋಳಿ ಕಾಲು ತೋರಿಸಿ ಹಿಡಿದ ಜನ..!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಐ.ಪಿ.ಸಿ ಸೆಕ್ಷನ್ 300ಗೆ ಡಿಟಿಎಸ್ ಅಲಂಕಾರ
ಶ್ರೀಚೌಡೇಶ್ವರಿ ಪ್ರಸನ್ನ ಮೂವೀಸ್ ಲಾಂಛನದಲ್ಲಿ ಆರ್.ಶಂಕರ್ ನಿರ್ಮಿಸುತ್ತಿರುವ 'ಐ.ಪಿ.ಸಿ ಸೆಕ್ಷನ್ 300 ಚಿತ್ರಕ್ಕೆ ಪ್ರಸಾದ್ ಸ್ಟೂಡಿಯೋದಲ್ಲಿ ಡಿ.ಟಿ.ಎಸ್ ಅಳವಡಿಸಲಾಗುತ್ತಿದೆ. ಕನ್ನಡ ಚಿತ್ರರಂಗದಲ್ಲಿ ಈತನಕ ಸಾಕಷ್ಟು ಚಿತ್ರಗಳನ್ನು ನಿರ್ಮಿಸಿರುವ ಶಂಕರ್ ಅವರು ಪ್ರಥಮ ಬಾರಿಗೆ ಕಾನೂನಿಗೆ ಸಂಬಂಧಿಸಿದ ಕಥಾವಸ್ತುವನ್ನು ಆಯ್ದುಕೊಂಡಿದ್ದಾರೆ.
ಸಾಹಸದಿಂದ ಕೂಡಿದ ಅಥವಾ ಪ್ರೇಮವೇ ಪ್ರಧಾನವಾಗಿರುವ ಚಿತ್ರಗಳು ಈಗ ಹೆಚ್ಚಾಗಿ ಬರುತ್ತಿದೆ. ಹಾಗಾಗಿ ನಾನು ಈ ವಿಶಿಷ್ಟ ಕಥಾವಸ್ತುವನ್ನು ಆಯ್ಕೆ ಮಾಡಿಕೊಂಡಿರುವುದಾಗಿ ತಿಳಿಸಿದ ನಿರ್ಮಾಪಕರು, ನಮ್ಮ ಚಿತ್ರ ಜನರ ಮನ್ನಣೆಗೆ ಪಾತ್ರವಾಗಲಿದೆ ಎಂದಿದ್ದಾರೆ.
ಕಿರುಚಿತ್ರಗಳನ್ನು ನಿರ್ದೆಶಿಸುತ್ತಿದ್ದ ಶಶಿಕಾಂತ್ ಈ ಚಿತ್ರವನ್ನು ನಿರ್ದೇಶಿಸುವ ಮೂಲಕ ಹಿರಿತೆರೆಯನ್ನು ಪ್ರವೇಶಿಸಿದ್ದಾರೆ. ಅವರೇ ಚಿತ್ರಕ್ಕೆ ಕಥೆ, ಚಿತ್ರಕಥೆಯನ್ನು ಬರೆದಿದ್ದಾರೆ. ವೀರಸಮರ್ಥ್ ಸಂಗೀತ, ನಿರಂಜನ್ ಬಾಬು ಛಾಯಾಗ್ರಹಣ, ಈಶ್ವರ್ ಸಂಕಲನ, ಬಾಬು ಖಾನ್ ಕಲೆ, ಅರುಣ್ ಕುಮಾರ್ ಸಹ ನಿರ್ದೇಶನ, ಅಚ್ಯುತ್ ರಾವ್ ನಿರ್ಮಾಣ ನಿರ್ವಹಣೆ, ಹಾಗೂ ಎಚ್.ನರಸಿಂಹ(ಜಾಲಹಳ್ಳಿ) ನಿರ್ಮಾಣ ಮೇಲ್ವಿಚಾರಣೆಯಿದೆ. ಚಿತ್ರದ ತಾರಾಬಳಗದಲ್ಲಿ ವಿಜಯರಾಘವೇಂದ್ರ, ಪ್ರಿಯಾಂಕ, ದೇವರಾಜ್, ಸುಮನ್ ರಂಗನಾಥ್, ಸೃಜನ್ ಲೋಕೇಶ್, ಯತಿರಾಜ್, ಶಂಕರ್, ರವೀಂದ್ರನಾಥ್ ಮುಂತಾದವರಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)