Don't Miss!
- News Rain: ಬರದಿಂದ ತತ್ತರಿಸಿದ ಮಲೆನಾಡು: ಕೊಪ್ಪ ಮೇರುತಿ ಶಿಖರದಲ್ಲಿ ವರುಣನಿಗೆ ಹೋಮ-ಹವನ
- Technology Tecno: ಬಹುನಿರೀಕ್ಷಿತ ಟೆಕ್ನೋ ಪೋವಾ 6 ಪ್ರೊ ಲಾಂಚ್! 12GB RAM.. 6000mAh ಬ್ಯಾಟರಿ.. ಬೆಲೆ ಎಷ್ಟು?
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇದು 'ಇನಿಯ' ಬರುವ ಸಮಯ
ಕನ್ನಡ ಚಿತ್ರರಂಗದ ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆಗಳಲ್ಲಿ ಶೈಲೇಂದ್ರ ಪ್ರೊಡಕ್ಷನ್ಸ್ ಕೂಡ ಒಂದು. ಈ ಸಂಸ್ಥೆಯ ನಿರ್ಮಾಣದಲ್ಲಿ ಸಾಕಷ್ಟು ಜನಪ್ರಿಯ ಚಿತ್ರಗಳು ಹೊರ ಬಂದಿದೆ. ಪ್ರಸ್ತುತ ಈ ಸಂಸ್ಥೆಯಿಂದ ನಿರ್ಮಾಣವಾಗಿರುವ ಚಿತ್ರ 'ಇನಿಯ'. ಸುಂದರ ಸ್ಥಳಗಳಲ್ಲಿ ಚಿತ್ರೀಕರಣ ಹಾಗೂ ಪ್ರತಿಷ್ಠಿತ ಸ್ಟೂಡಿಯೋದಲ್ಲಿ ಚಿತ್ರೀಕರಣೇತರ ಚಟುವಟಿಕೆಗಳನ್ನು ಪೂರ್ಣಗೊಳಿಸಿರುವ ಚಿತ್ರಕ್ಕೆ ಈಗ ಪ್ರಥಮಪ್ರತಿ ಸಿದ್ಧವಾಗಿದೆ.
ಸೆನ್ಸಾರ್ ಮಂಡಳಿ ವೀಕ್ಷಿಸಿದ ನಂತರ ಸನಿಹದಲ್ಲೇ 'ಇನಿಯ'ನನ್ನು ತೆರೆಗೆ ತರುವುದಾಗಿ ನಿರ್ಮಾಪಕ ಶೈಲೇಂದ್ರ ಬಾಬು ತಿಳಿಸಿದ್ದಾರೆ. 'ಮುಸ್ಸಂಜೆ ಮಾತು' ಚಿತ್ರವನ್ನು ನಿರ್ದೇಶಿಸಿ ಖ್ಯಾತರಾದ ಮಹೇಶ್ ಈ ಚಿತ್ರದ ನಿರ್ದೇಶಕರು. 'ಈ ಚಿತ್ರ ಕೂಡ ನನಗೆ ಯಶಸ್ಸು ತಂದುಕೊಡುವುದರಲ್ಲಿ ಸಂದೇಹವಿಲ್ಲ' ಎಂಬ ಅಭಿಪ್ರಾಯ ನಿರ್ದೇಶಕರಿಂದ ವ್ಯಕ್ತವಾಗಿದೆ.
ಬಾಲಾಜಿ ಚಿತ್ರದ ನಾಯಕರಾಗಿದ್ದು, ಪೂಜಾ ಗಾಂಧಿ 'ಇನಿಯನ ನಾಯಕಿಯಾಗಿದ್ದಾರೆ. ನಿರ್ದೇಶಕರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಸುಂದರನಾಥ ಸುವರ್ಣರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಮಧುಸೂದನ ರೆಡ್ಡಿ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.
ವಿ.ಶ್ರೀಧರ್ ಸಂಗೀತ, ಕವಿರಾಜ್, ಶ್ರೀಧರ್ ಗೀತರಚನೆ, ಮೋಹನ್ ಸಂಕಲನ, ರವಿವರ್ಮರ ಸಾಹಸವಿರುವ ಚಿತ್ರದ ತಾರಾಬಳಗದಲ್ಲಿ ಜೈಜಗದೀಶ್, ಊರ್ವಶಿ, ರೇಖಾ, ಜ್ಯೋತಿ, ನೀನಾಸಂ ಅಶ್ವತ್, ಹರೀಶ್ ರಾಯ್, ಲೋಕನಾಥ್, ಬಿ.ವಿ.ರಾಧ ಮುಂತಾದವರಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)